<p><strong>ಜನವಾಡ: </strong>ಗ್ರಾಮಗಳಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶಂಭುಲಿಂಗ ಹಿರೇಮಠ ಸಲಹೆ ಮಾಡಿದರು.</p>.<p>ಬೀದರ್ ತಾಲ್ಲೂಕಿನ ಜನವಾಡದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಪೋಷಣ ಅಭಿಯಾನ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ರೈತ ಮಹಿಳೆಯರಿಗೆ ಆಯೋಜಿಸಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೌಷ್ಟಿಕ ಆಹಾರ ಸೇವನೆ ಮೂಲಕ ಅಪೌಷ್ಟಿಕತೆಯನ್ನು ಹೋಗಲಾಡಿಸಬಹುದು ಎಂದು ತಿಳಿಸಿದರು.</p>.<p>ಉತ್ತಮ ಆರೋಗ್ಯಕ್ಕಾಗಿ ಆಹಾರದಲ್ಲಿ ಸಿರಿಧಾನ್ಯ ಹಾಗೂ ಸೋಯಾ ಅವರೆ ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು ಎಂದು ಡಾ. ರಾಜೇಶ್ವರಿ ಆರ್. ತಿಳಿಸಿದರು.</p>.<p>ಅಪೌಷ್ಟಿಕತೆ ನಿವಾರಣೆಯಲ್ಲಿ ಬೀದರ್ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹೇಳಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ ಶಿಂಧೆ, ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸುನೀಲ ಕುಲಕರ್ಣಿ ಮಾತನಾಡಿದರು. ಪೋಷಣ ಅಭಿಯಾಣದ ಜಿಲ್ಲಾ ಸಂಯೋಜಕಿ ಅನಿತಾ ಚಿಮಕೋಡೆ, ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ಉಪನ್ಯಾಸ ನೀಡಿದರು.<br />ಪೌಷ್ಟಿಕ ಕೈತೋಟಕ್ಕೆ ಬೀಜ ವಿತರಿಸಲಾಯಿತು. ಸಿದ್ರಾಮಪ್ಪ ಮಣಿಗೆ, ಸಂಗಮಿತ್ರಾ ಉಪಸ್ಥಿತರಿದ್ದರು. ಡಾ. ಅಕ್ಷಯಕುಮಾರ ಸ್ವಾಗತಿಸಿದರು. ಡಾ.ಆರ್.ಎಲ್. ಜಾಧವ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ: </strong>ಗ್ರಾಮಗಳಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶಂಭುಲಿಂಗ ಹಿರೇಮಠ ಸಲಹೆ ಮಾಡಿದರು.</p>.<p>ಬೀದರ್ ತಾಲ್ಲೂಕಿನ ಜನವಾಡದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಪೋಷಣ ಅಭಿಯಾನ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ರೈತ ಮಹಿಳೆಯರಿಗೆ ಆಯೋಜಿಸಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೌಷ್ಟಿಕ ಆಹಾರ ಸೇವನೆ ಮೂಲಕ ಅಪೌಷ್ಟಿಕತೆಯನ್ನು ಹೋಗಲಾಡಿಸಬಹುದು ಎಂದು ತಿಳಿಸಿದರು.</p>.<p>ಉತ್ತಮ ಆರೋಗ್ಯಕ್ಕಾಗಿ ಆಹಾರದಲ್ಲಿ ಸಿರಿಧಾನ್ಯ ಹಾಗೂ ಸೋಯಾ ಅವರೆ ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು ಎಂದು ಡಾ. ರಾಜೇಶ್ವರಿ ಆರ್. ತಿಳಿಸಿದರು.</p>.<p>ಅಪೌಷ್ಟಿಕತೆ ನಿವಾರಣೆಯಲ್ಲಿ ಬೀದರ್ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹೇಳಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ ಶಿಂಧೆ, ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸುನೀಲ ಕುಲಕರ್ಣಿ ಮಾತನಾಡಿದರು. ಪೋಷಣ ಅಭಿಯಾಣದ ಜಿಲ್ಲಾ ಸಂಯೋಜಕಿ ಅನಿತಾ ಚಿಮಕೋಡೆ, ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ಉಪನ್ಯಾಸ ನೀಡಿದರು.<br />ಪೌಷ್ಟಿಕ ಕೈತೋಟಕ್ಕೆ ಬೀಜ ವಿತರಿಸಲಾಯಿತು. ಸಿದ್ರಾಮಪ್ಪ ಮಣಿಗೆ, ಸಂಗಮಿತ್ರಾ ಉಪಸ್ಥಿತರಿದ್ದರು. ಡಾ. ಅಕ್ಷಯಕುಮಾರ ಸ್ವಾಗತಿಸಿದರು. ಡಾ.ಆರ್.ಎಲ್. ಜಾಧವ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>