ಬೀದರ್: ‘ಸಮ ಸಮಾಜ ನಿರ್ಮಾಣಕ್ಕಾಗಿ ಬಸವಾದಿ ಶರಣರು 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿದ್ದರು. ಈ ಸ್ಥಳ ಬಸವಕಲ್ಯಾಣ ಮಧ್ಯ ಭಾಗದಲ್ಲಿದ್ದು, ಸರ್ಕಾರ ಸ್ವಾಧೀನಕ್ಕೆ ಪಡೆದು ಭವ್ಯ ಸ್ಮಾರಕ ನಿರ್ಮಾಣ ಮಾಡಬೇಕು’ ಎಂದು 12ನೇ ಶತಮಾನದ ಮೂಲ ಅನುಭವ ಮಂಟಪ ಸ್ಮಾರಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ರಾಜೇಶ್ವರ ಶಿವಾಚಾರ್ಯ ಒತ್ತಾಯಿಸಿದರು.