ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ | ಬಸ್ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಆರೋ‍ಪ

Published 7 ಮಾರ್ಚ್ 2024, 15:57 IST
Last Updated 7 ಮಾರ್ಚ್ 2024, 15:57 IST
ಅಕ್ಷರ ಗಾತ್ರ

ಭಾಲ್ಕಿ: ‘ಸರ್ಕಾರಿ ಬಸ್‌ಗಳ ಕೊರತೆಯಿಂದಾಗಿ ಗುರುವಾರ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ, ಶಾಲೆ, ಕಾಲೇಜುಗಳಿಗೆ ತೆರಳಲು ತೊಂದರೆ ಉಂಟಾಗಿದೆ’ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುರೇಶ ಬಿರಾದಾರ ದೂರಿದ್ದಾರೆ.

‘ಬಸವಕಲ್ಯಾಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಕರೆತರಲು ಜಿಲ್ಲೆಯ ಎಲ್ಲ ತಾಲ್ಲೂಕು ಬಸ್ ಘಟಕಗಳಿಂದ ಬಸ್‌ಗಳನ್ನು ಬಳಸಿಕೊಂಡಿದ್ದರಿಂದ ಪಿಯುಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳು ತುಂಬಾ ಅನಾನುಕೂಲ ಅನುಭವಿಸಿದರು’ ಎಂದು ದೂರಿದ್ದಾರೆ. ಜಿಲ್ಲೆಯ ಪಿಯುಸಿ ಫಲಿತಾಂಶದಲ್ಲಿ ವ್ಯತ್ಯಾಸ ಆದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಹೊಣೆಗಾರರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT