<p><strong>ಬೀದರ್: </strong>‘ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ನಾಗರಿಕ ನೋಂದಣಿ ಕಾಯ್ದೆ ದೇಶದ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಅಭಿಪ್ರಾಯಪಟ್ಟರು.</p>.<p>ನೌಬಾದ್ ಬಳಿಯ ಪುಣ್ಯಾಶ್ರಮದಲ್ಲಿ ನಿರ್ಮಾಣವಾಗುತ್ತಿರುವ ರೇಣುಕಾಚಾರ್ಯರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ನೆರವೇರಿಸಿದ ಬಳಿಕ ಭಕ್ತರನ್ನುದ್ದೇಶಿಸಿ ಅವರು ಮಾತನಾಡಿದರು.</p>.<p>‘ದೇಶದ ಎಲ್ಲ ಜನ ಸಮುದಾಯಗಳು ಕಾಯ್ದೆಯ ಮಹತ್ವವನ್ನು ಮನಗಾಣಬೇಕು. ಕಾಯ್ದೆಯಲ್ಲಿನ ತಪ್ಪು–ಒಪ್ಪುಗಳನ್ನು ಜನಸಾಮಾನ್ಯರಿಗೆ ತಿಳಿಸಬೇಕು. ರಾಜಕಾರಣಿಗಳು ಪರಸ್ಪರ ಕಚ್ಚಾಡಿಕೊಳ್ಳಬಾರದು. ಇದರಿಂದ ವಿಶ್ವಗುರು ಸ್ಥಾನಕ್ಕೇರುತ್ತಿರುವ ನಮ್ಮ ದೇಶವನ್ನು ಮತ್ತೆ ಹಿಂದೆ ತಳ್ಳಿದಂತಾಗುತ್ತದೆ’ ಎಂದರು.</p>.<p>‘ಹೈದರಾಬಾದ್ ಕರ್ನಾಟಕ ಎನ್ನುವ ಪದವನ್ನು ತೆಗೆದು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಮಹೋನ್ನತ ಕಾರ್ಯ ಮಾಡಿದೆ’ ಎಂದು ಬಣ್ಣಿಸಿದರು.</p>.<p>‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಇದೆ. ಉಭಯ ಸರ್ಕಾರಗಳು ಈ ಭಾಗದ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಬೇಕು’ ಎಂದು ಹೇಳಿದರು.</p>.<p>‘12ನೇ ಶತಮಾನದಲ್ಲಿ ಬಸವಣ್ಣನವರು ಬಾಳಿ ಬದುಕಿದ ಭೂಮಿ, 17ನೇ ಶತಮಾನದಲ್ಲಿ ಗುರು ನಾನಕರು ಬಂದು ಹೋಗಿರುವ ಪ್ರದೇಶ ಇದು. ಇಂಥ ಪವಿತ್ರ ಪ್ರದೇಶದ ಉದ್ಧಾರ ಆಗಬೇಕಿದೆ. ಜನಪ್ರತಿನಿಧಿಗಳು ಗಮನ ಹರಿಸಬೇಕಿದೆ’ ಎಂದು ತಿಳಿಸಿದರು.</p>.<p>‘ಈ ಭಾಗಕ್ಕೆ ಈಗಾಗಲೇ ಸಂವಿಧಾನದ ಕಲಂ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಕೊಡಲಾಗಿದೆ. ಇಲ್ಲಿ ಶೈಕ್ಷಣಿಕ ಗುಣಮಟ್ಟ ವೃದ್ಧಿಸಬೇಕು, ಉದ್ಯೋಗಾವಕಾಶಗಳು ಹೆಚ್ಚಾಗಬೇಕು. ಶೈಕ್ಷಣಿಕ ಹಾಗೂ ಸಾಮಾಜಿಕ ನ್ಯಾಯ ದೊರಕಬೇಕು’ ಎಂದು ಹೇಳಿದರು.</p>.<p>ಮೆಹಕರದ ರಾಜೇಶ್ವರ ಶಿವಾಚಾರ್ಯರು ಮಾತನಾಡಿ, ‘ಸಂಸ್ಕಾರ ಹಾಗೂ ಸಂಸ್ಕೃತಿ ಉಳಿದಲ್ಲಿ ದೇಶ ಅಭಿವೃದ್ಧಿಯಾಗುತ್ತದೆ. ಭೌತಿಕ ವಿಕಾಸವಾದರೂ ಸಂಸ್ಕೃತಿ ರಹಿತ ಬದುಕಿನಿಂದಾಗಿ ಮಾನವ ಗಂಡಾಂತರದಲ್ಲಿದ್ದಾನೆ. ಹೀಗಾಗಿ ಸಾಮಾಜಿಕ ಮೌಲ್ಯಗಳಿಗೆ ಪ್ರಾಮುಖ್ಯ ನೀಡಬೇಕಿದೆ’ ಎಂದು ತಿಳಿಸಿದರು.<br /><br />ಪುಣ್ಯಾಶ್ರಮಕ್ಕೆ ಮೂರುವರೆ ಎಕರೆ ಜಾಗ ದಾನ ಮಾಡಿ ರೇಣುಕಾಚಾರ್ಯರ ಮಂದಿರ ನಿರ್ಮಾಣಕ್ಕೂ ಧನ ಸಹಾಯ ಒದಗಿಸಿದ ಷಣ್ಮುಖಯ್ಯ ಸ್ವಾಮಿ ಹಾಗೂ ತೇಜಮ್ಮ ದಂಪತಿಯನ್ನು ಸನ್ಮಾನಿಸಲಾಯಿತು.</p>.<p>ಮಲ್ಲಿಕಾರ್ಜುನ್ ಚಿಕಪೇಟ, ಮಂಜುನಾಥ ಬಿರಾದಾರ, ಶ್ರೀಕಾಂತ ಸ್ವಾಮಿ ಸೋಲಪೂರ, ಪ್ರಭುಲಿಂಗ ಸ್ವಾಮಿ ಡಾವರಗಾಂವ, ಶ್ರೀಕಾಂತ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ನಾಗರಿಕ ನೋಂದಣಿ ಕಾಯ್ದೆ ದೇಶದ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಅಭಿಪ್ರಾಯಪಟ್ಟರು.</p>.<p>ನೌಬಾದ್ ಬಳಿಯ ಪುಣ್ಯಾಶ್ರಮದಲ್ಲಿ ನಿರ್ಮಾಣವಾಗುತ್ತಿರುವ ರೇಣುಕಾಚಾರ್ಯರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ನೆರವೇರಿಸಿದ ಬಳಿಕ ಭಕ್ತರನ್ನುದ್ದೇಶಿಸಿ ಅವರು ಮಾತನಾಡಿದರು.</p>.<p>‘ದೇಶದ ಎಲ್ಲ ಜನ ಸಮುದಾಯಗಳು ಕಾಯ್ದೆಯ ಮಹತ್ವವನ್ನು ಮನಗಾಣಬೇಕು. ಕಾಯ್ದೆಯಲ್ಲಿನ ತಪ್ಪು–ಒಪ್ಪುಗಳನ್ನು ಜನಸಾಮಾನ್ಯರಿಗೆ ತಿಳಿಸಬೇಕು. ರಾಜಕಾರಣಿಗಳು ಪರಸ್ಪರ ಕಚ್ಚಾಡಿಕೊಳ್ಳಬಾರದು. ಇದರಿಂದ ವಿಶ್ವಗುರು ಸ್ಥಾನಕ್ಕೇರುತ್ತಿರುವ ನಮ್ಮ ದೇಶವನ್ನು ಮತ್ತೆ ಹಿಂದೆ ತಳ್ಳಿದಂತಾಗುತ್ತದೆ’ ಎಂದರು.</p>.<p>‘ಹೈದರಾಬಾದ್ ಕರ್ನಾಟಕ ಎನ್ನುವ ಪದವನ್ನು ತೆಗೆದು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಮಹೋನ್ನತ ಕಾರ್ಯ ಮಾಡಿದೆ’ ಎಂದು ಬಣ್ಣಿಸಿದರು.</p>.<p>‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಇದೆ. ಉಭಯ ಸರ್ಕಾರಗಳು ಈ ಭಾಗದ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಬೇಕು’ ಎಂದು ಹೇಳಿದರು.</p>.<p>‘12ನೇ ಶತಮಾನದಲ್ಲಿ ಬಸವಣ್ಣನವರು ಬಾಳಿ ಬದುಕಿದ ಭೂಮಿ, 17ನೇ ಶತಮಾನದಲ್ಲಿ ಗುರು ನಾನಕರು ಬಂದು ಹೋಗಿರುವ ಪ್ರದೇಶ ಇದು. ಇಂಥ ಪವಿತ್ರ ಪ್ರದೇಶದ ಉದ್ಧಾರ ಆಗಬೇಕಿದೆ. ಜನಪ್ರತಿನಿಧಿಗಳು ಗಮನ ಹರಿಸಬೇಕಿದೆ’ ಎಂದು ತಿಳಿಸಿದರು.</p>.<p>‘ಈ ಭಾಗಕ್ಕೆ ಈಗಾಗಲೇ ಸಂವಿಧಾನದ ಕಲಂ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಕೊಡಲಾಗಿದೆ. ಇಲ್ಲಿ ಶೈಕ್ಷಣಿಕ ಗುಣಮಟ್ಟ ವೃದ್ಧಿಸಬೇಕು, ಉದ್ಯೋಗಾವಕಾಶಗಳು ಹೆಚ್ಚಾಗಬೇಕು. ಶೈಕ್ಷಣಿಕ ಹಾಗೂ ಸಾಮಾಜಿಕ ನ್ಯಾಯ ದೊರಕಬೇಕು’ ಎಂದು ಹೇಳಿದರು.</p>.<p>ಮೆಹಕರದ ರಾಜೇಶ್ವರ ಶಿವಾಚಾರ್ಯರು ಮಾತನಾಡಿ, ‘ಸಂಸ್ಕಾರ ಹಾಗೂ ಸಂಸ್ಕೃತಿ ಉಳಿದಲ್ಲಿ ದೇಶ ಅಭಿವೃದ್ಧಿಯಾಗುತ್ತದೆ. ಭೌತಿಕ ವಿಕಾಸವಾದರೂ ಸಂಸ್ಕೃತಿ ರಹಿತ ಬದುಕಿನಿಂದಾಗಿ ಮಾನವ ಗಂಡಾಂತರದಲ್ಲಿದ್ದಾನೆ. ಹೀಗಾಗಿ ಸಾಮಾಜಿಕ ಮೌಲ್ಯಗಳಿಗೆ ಪ್ರಾಮುಖ್ಯ ನೀಡಬೇಕಿದೆ’ ಎಂದು ತಿಳಿಸಿದರು.<br /><br />ಪುಣ್ಯಾಶ್ರಮಕ್ಕೆ ಮೂರುವರೆ ಎಕರೆ ಜಾಗ ದಾನ ಮಾಡಿ ರೇಣುಕಾಚಾರ್ಯರ ಮಂದಿರ ನಿರ್ಮಾಣಕ್ಕೂ ಧನ ಸಹಾಯ ಒದಗಿಸಿದ ಷಣ್ಮುಖಯ್ಯ ಸ್ವಾಮಿ ಹಾಗೂ ತೇಜಮ್ಮ ದಂಪತಿಯನ್ನು ಸನ್ಮಾನಿಸಲಾಯಿತು.</p>.<p>ಮಲ್ಲಿಕಾರ್ಜುನ್ ಚಿಕಪೇಟ, ಮಂಜುನಾಥ ಬಿರಾದಾರ, ಶ್ರೀಕಾಂತ ಸ್ವಾಮಿ ಸೋಲಪೂರ, ಪ್ರಭುಲಿಂಗ ಸ್ವಾಮಿ ಡಾವರಗಾಂವ, ಶ್ರೀಕಾಂತ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>