<p><strong>ಬೀದರ್: </strong>‘ಸಂಕಷ್ಟದಲ್ಲಿ ಇರುವ ಮಕ್ಕಳ ನೆರವಿಗೆ 1098ಗೆ ಕರೆ ಮಾಡಬೇಕು’ ಎಂದು ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕ ನೆಲ್ಸನ್ ರಾಚೆ ಹೇಳಿದರು.</p>.<p>ಇಲ್ಲಿಯ ನೌಬಾದ್ನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಡಾನ್ ಬೊಸ್ಕೊ ಸಂಚಾಲಿತ ಮಕ್ಕಳ ಸಹಾಯವಾಣಿ 1098 ವತಿಯಿಂದ ಗುರುವಾರ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ಸಹಾಯವಾಣಿ 1098 ದಿನದ 24 ಗಂಟೆ ನಿರಂತರ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟಕ್ಕೆ ಸಿಲುಕಿದ ಮಕ್ಕಳ ಸಮಸ್ಯೆಗೆ ತಕ್ಷಣ ಸ್ಪಂದಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಮಕ್ಕಳ ಸಹಾಯವಾಣಿ ಜನ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಯಾರು ಬೇಕಾದರೂ ಕರೆ ಮಾಡಿ ಸಂಕಷ್ಟದಲ್ಲಿರುವ ಮಕ್ಕಳ ಬಗ್ಗೆ ಮಾಹಿತಿ ಕೊಡಬಹುದು’ ಎಂದು ಹೇಳಿದರು.</p>.<p><br />ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಪದ್ಮಾವತಿ ಮಾತನಾಡಿ, ‘ಪೊಲೀಸರು ಇರುವುದೇ ಜನರ ರಕ್ಷಣೆಗಾಗಿ. ಹೀಗಾಗಿ ಪೊಲೀಸರಿಗೆ ಹೆದರಬಾರದು. ಅವರ ಬಳಿ ಸಮಸ್ಯೆ ಹೇಳಿಕೊಂಡು ಪರಿಹಾರ ಕಂಡುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಅಪರಿಚಿತ ಮಕ್ಕಳು ಕಂಡು ಬಂದರೆ ಸಾರ್ವಜನಿಕರು ದೂರವಾಣಿ ಸಂಖ್ಯೆ 100 ಅಥವಾ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಬೇಕು’ ಎಂದು ತಿಳಿಸಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಸಾವನ್ ವಾಗ್ಲೆ ಮಾತನಾಡಿ, ‘ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಬೇಕು’ ಎಂದು ಹೇಳಿದರು.</p>.<p>‘ಶಿಕ್ಷಣದಿಂದ ದೂರ ಉಳಿದ ಮಕ್ಕಳನ್ನು ಗುರುತಿಸಬೇಕು. ಅವರನ್ನು ಮತ್ತೆ ಮುಖ್ಯ ವಾಹಿನಿಗೆ ತರಬೇಕು’ ಎಂದು ಸಲಹೆ ಮಾಡಿದರು.</p>.<p>ನೌಬಾದ್ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ ಮೊಳಕೇರಿ ಮಾತನಾಡಿ, ‘ಮಕ್ಕಳ ಸರ್ವಾಂಗೀಣ ಬೆಳವಣಿಗೆ ಶಿಕ್ಷಣದಿಂದ ಮಾತ್ರ ಸಾಧ್ಯವಿದೆ. ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಶ್ರಮಿಸಬೇಕು’ ಎಂದು ತಿಳಿಸಿದರು.</p>.<p>ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ಸಂಜುಕುಮಾರ ಡಾಕುಳಗಿ ಮಾತನಾಡಿದರು.ರಘುವೆಲ್, ಜಾನ್ಸನ್ ಇದ್ದರು. ಸಾಲೋಮನ್ ಖಾದಿ ನಿರೂಪಿಸಿದರು. ಪ್ರಭಾಕರ ಮಾಳಗೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ಸಂಕಷ್ಟದಲ್ಲಿ ಇರುವ ಮಕ್ಕಳ ನೆರವಿಗೆ 1098ಗೆ ಕರೆ ಮಾಡಬೇಕು’ ಎಂದು ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕ ನೆಲ್ಸನ್ ರಾಚೆ ಹೇಳಿದರು.</p>.<p>ಇಲ್ಲಿಯ ನೌಬಾದ್ನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಡಾನ್ ಬೊಸ್ಕೊ ಸಂಚಾಲಿತ ಮಕ್ಕಳ ಸಹಾಯವಾಣಿ 1098 ವತಿಯಿಂದ ಗುರುವಾರ ಆಯೋಜಿಸಿದ್ದ ತೆರೆದ ಮನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳ ಸಹಾಯವಾಣಿ 1098 ದಿನದ 24 ಗಂಟೆ ನಿರಂತರ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟಕ್ಕೆ ಸಿಲುಕಿದ ಮಕ್ಕಳ ಸಮಸ್ಯೆಗೆ ತಕ್ಷಣ ಸ್ಪಂದಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಮಕ್ಕಳ ಸಹಾಯವಾಣಿ ಜನ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಯಾರು ಬೇಕಾದರೂ ಕರೆ ಮಾಡಿ ಸಂಕಷ್ಟದಲ್ಲಿರುವ ಮಕ್ಕಳ ಬಗ್ಗೆ ಮಾಹಿತಿ ಕೊಡಬಹುದು’ ಎಂದು ಹೇಳಿದರು.</p>.<p><br />ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಪದ್ಮಾವತಿ ಮಾತನಾಡಿ, ‘ಪೊಲೀಸರು ಇರುವುದೇ ಜನರ ರಕ್ಷಣೆಗಾಗಿ. ಹೀಗಾಗಿ ಪೊಲೀಸರಿಗೆ ಹೆದರಬಾರದು. ಅವರ ಬಳಿ ಸಮಸ್ಯೆ ಹೇಳಿಕೊಂಡು ಪರಿಹಾರ ಕಂಡುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಅಪರಿಚಿತ ಮಕ್ಕಳು ಕಂಡು ಬಂದರೆ ಸಾರ್ವಜನಿಕರು ದೂರವಾಣಿ ಸಂಖ್ಯೆ 100 ಅಥವಾ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಬೇಕು’ ಎಂದು ತಿಳಿಸಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಸಾವನ್ ವಾಗ್ಲೆ ಮಾತನಾಡಿ, ‘ಮಕ್ಕಳ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಬೇಕು’ ಎಂದು ಹೇಳಿದರು.</p>.<p>‘ಶಿಕ್ಷಣದಿಂದ ದೂರ ಉಳಿದ ಮಕ್ಕಳನ್ನು ಗುರುತಿಸಬೇಕು. ಅವರನ್ನು ಮತ್ತೆ ಮುಖ್ಯ ವಾಹಿನಿಗೆ ತರಬೇಕು’ ಎಂದು ಸಲಹೆ ಮಾಡಿದರು.</p>.<p>ನೌಬಾದ್ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ ಮೊಳಕೇರಿ ಮಾತನಾಡಿ, ‘ಮಕ್ಕಳ ಸರ್ವಾಂಗೀಣ ಬೆಳವಣಿಗೆ ಶಿಕ್ಷಣದಿಂದ ಮಾತ್ರ ಸಾಧ್ಯವಿದೆ. ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಶ್ರಮಿಸಬೇಕು’ ಎಂದು ತಿಳಿಸಿದರು.</p>.<p>ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ಸಂಜುಕುಮಾರ ಡಾಕುಳಗಿ ಮಾತನಾಡಿದರು.ರಘುವೆಲ್, ಜಾನ್ಸನ್ ಇದ್ದರು. ಸಾಲೋಮನ್ ಖಾದಿ ನಿರೂಪಿಸಿದರು. ಪ್ರಭಾಕರ ಮಾಳಗೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>