ಭಾಲ್ಕಿ: ತಾಲ್ಲೂಕಿನಲ್ಲಿ ಶಾಲೆಗಳಲ್ಲಿ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಮೇಲ್ವರ್ಗದವರೂ ಬೇಡ ಜಂಗಮ, ಮಾಲ ಜಂಗಮ ಭೂವಿ ಎಂದು ನಮೂದಿಸಿ ಪರಿಶಿಷ್ಟ ಜಾತಿ ಸಮುದಾಯದ ಜನರ ಮೀಸಲಾತಿಯನ್ನು ಕಸಿಯುವ ಪ್ರಯತ್ನ ನಡೆಯುತ್ತಿದ್ದು ಇದನ್ನು ತಡೆಹಿಡಿಯಬೇಕು ಎಂದು ತಾಲ್ಲೂಕು ಯುವ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.