<p><strong>ಜನವಾಡ:</strong> ಬೀದರ್ ತಾಲ್ಲೂಕಿನ ಜನವಾಡದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಯಮ ಬಾಹಿರವಾಗಿ ನಡೆಸುತ್ತಿರುವ ಮದ್ಯದ ಅಂಗಡಿಯ ಪರವಾನಗಿ ರದ್ದುಪಡಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಯುವ ಘಟಕ ಒತ್ತಾಯಿಸಿದೆ.</p>.<p>ಯುವ ಘಟಕದ ಪದಾಧಿಕಾರಿಗಳು ಈ ಕುರಿತು ಅಬಕಾರಿ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು ಬೀದರ್ನಲ್ಲಿ ಮಂಗಳವಾರ ಅಬಕಾರಿ ಉಪ ಆಯುಕ್ತರಿಗೆ ಸಲ್ಲಿಸಿದರು.</p>.<p>ಮದ್ಯದ ಅಂಗಡಿ ಇರುವ ಪ್ರದೇಶದಲ್ಲಿ ಮನೆಗಳು, ಮಸೀದಿ, ಶಾಲೆಗಳು ಇವೆ. ಅಂಗಡಿಯಿಂದ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ ಎಂದು ಗಮನ ಸೆಳೆದರು.</p>.<p>ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯದ ಅಂಗಡಿಯ ಪರವಾನಗಿ ರದ್ದುಪಡಿಸಬೇಕು. ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಾ ಫರೀದ್ ಉಲ್ಲಾ ಖಾನ್, ಪ್ರಮುಖರಾದ ಶೇರಖಾನ್, ಶಮಶೀರ್ಖಾನ್, ಕೃಷ್ಣ ಅಶೋಕ ಹುಪಳೆ, ಇಸ್ಮಾಯಿಲ್ ಇಮ್ಜಾದ್ ಅಲಿ ಜಮಾದಾರ್, ರಹೀಮ್ ಅತ್ತಾರ್, ಆರಿಫ್, ಸಲೀಮ್, ರಫಿ ಪಟೇಲ್, ಜೈರಾಜ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ:</strong> ಬೀದರ್ ತಾಲ್ಲೂಕಿನ ಜನವಾಡದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಯಮ ಬಾಹಿರವಾಗಿ ನಡೆಸುತ್ತಿರುವ ಮದ್ಯದ ಅಂಗಡಿಯ ಪರವಾನಗಿ ರದ್ದುಪಡಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಯುವ ಘಟಕ ಒತ್ತಾಯಿಸಿದೆ.</p>.<p>ಯುವ ಘಟಕದ ಪದಾಧಿಕಾರಿಗಳು ಈ ಕುರಿತು ಅಬಕಾರಿ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು ಬೀದರ್ನಲ್ಲಿ ಮಂಗಳವಾರ ಅಬಕಾರಿ ಉಪ ಆಯುಕ್ತರಿಗೆ ಸಲ್ಲಿಸಿದರು.</p>.<p>ಮದ್ಯದ ಅಂಗಡಿ ಇರುವ ಪ್ರದೇಶದಲ್ಲಿ ಮನೆಗಳು, ಮಸೀದಿ, ಶಾಲೆಗಳು ಇವೆ. ಅಂಗಡಿಯಿಂದ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ ಎಂದು ಗಮನ ಸೆಳೆದರು.</p>.<p>ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯದ ಅಂಗಡಿಯ ಪರವಾನಗಿ ರದ್ದುಪಡಿಸಬೇಕು. ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಾ ಫರೀದ್ ಉಲ್ಲಾ ಖಾನ್, ಪ್ರಮುಖರಾದ ಶೇರಖಾನ್, ಶಮಶೀರ್ಖಾನ್, ಕೃಷ್ಣ ಅಶೋಕ ಹುಪಳೆ, ಇಸ್ಮಾಯಿಲ್ ಇಮ್ಜಾದ್ ಅಲಿ ಜಮಾದಾರ್, ರಹೀಮ್ ಅತ್ತಾರ್, ಆರಿಫ್, ಸಲೀಮ್, ರಫಿ ಪಟೇಲ್, ಜೈರಾಜ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>