ಯುವಜನಾಂಗಕ್ಕೆ ಡಾ.ಚನ್ನಬಸವ ಪಟ್ಟದ್ದೇವರ ಜೀವನ, ಸಾಧನೆ ಪರಿಚಯಿಸುವ ನಿಟ್ಟಿನಲ್ಲಿ ಕಳೆದ 20 ವರ್ಷಗಳಿಂದ ಪಟ್ಟದ್ದೇವರ ಸ್ಮರಣೋತ್ಸವವನ್ನು ಶ್ರೀಮಠದ ವತಿಯಿಂದ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ಕೋವಿಡ್-19 ಪ್ರಯುಕ್ತ ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಈಚೆಗೆ ಭಕ್ತರ ಪೂರ್ವಭಾವಿ ಸಭೆ ಕರೆದು ಸರಳ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಕೋವಿಡ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಈ ಕಾರಣ ಸ್ಮರಣೋತ್ಸವ ರದ್ದುಪಡಿಸ ಲಾಗಿದೆ. ಭಕ್ತರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.