<p>ಬೀದರ್: ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಕ್ಯಾನ್ಸರ್ನಿಂದ ಗುಣಮುಖರಾಗಬಹುದು ಎಂದು ಖ್ಯಾತ ಕ್ಯಾನ್ಸರ್ ತಜ್ಞ ಡಾ. ವಿಪಿನ್ ಗೋಯಲ್ ಹೇಳಿದರು.</p>.<p>ನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳಿಗೆ ಆಯೋಜಿಸಿದ್ದ ಗರ್ಭ ಕಂಠ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಯಾನ್ಸರ್ನ ವಿಧಗಳಲ್ಲಿ ಮಹಿಳೆಯರನ್ನು ಕಾಡುವ ಗರ್ಭ ಕಂಠದ ಕ್ಯಾನ್ಸರ್ ಒಂದು. ಲಸಿಕೆ ಪಡೆಯುವ ಮೂಲಕ ಇದನ್ನು ತಡೆಗಟ್ಟಬಹುದು. 13 ರಿಂದ 26 ವರ್ಷದ ಒಳಗಿನ ಯುವತಿಯರು ಲಸಿಕೆ ಪಡೆಯಬೇಕು ಎಂದು ಸಲಹೆ ಮಾಡಿದರು.<br />ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು ಎಂದರು.<br />ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂ. ಪೂರ್ಣಿಮಾ ಜಿ. ಮಾತನಾಡಿ, ಮಹಿಳೆಯರು ಕ್ಯಾನ್ಸರ್ ಬಗ್ಗೆ ಅರಿಯಬೇಕು. ಕ್ಯಾನ್ಸರ್ ತಡೆಗೆ ಲಸಿಕೆ ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.<br />ಸಂಸ್ಥೆಯ ನಿರ್ದೇಶಕ ಮುನೇಶ್ವರ ಲಾಖಾ ಮಾತನಾಡಿ, ಡಾ. ವಿಪಿನ್ ಗೋಯಲ್ ಬೀದರ್ನವರು. ದೇಶ, ವಿದೇಶದಲ್ಲಿ ಜನ ಮನ್ನಣೆ ಪಡೆದ ಕ್ಯಾನ್ಸರ್ ತಜ್ಞರಲ್ಲಿ ಒಬ್ಬರು. ಅವರು ತವರು ಜಿಲ್ಲೆಯ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.<br />ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯೆ ಸುನೀತಾ ಸ್ವಾಮಿ ಇದ್ದರು. ಸಂಸ್ಥೆಯ ಮಹಿಳಾ ಸಿಬ್ಬಂದಿ, ಜ್ಞಾನಸುಧಾ ವಿದ್ಯಾಲಯ, ಪದವಿಪೂರ್ವ ಕಾಲೇಜು, ಜ್ಞಾನಸುಧಾ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಜ್ಞಾನಸುಧಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಕ್ಯಾನ್ಸರ್ನಿಂದ ಗುಣಮುಖರಾಗಬಹುದು ಎಂದು ಖ್ಯಾತ ಕ್ಯಾನ್ಸರ್ ತಜ್ಞ ಡಾ. ವಿಪಿನ್ ಗೋಯಲ್ ಹೇಳಿದರು.</p>.<p>ನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಹೆಣ್ಣು ಮಕ್ಕಳಿಗೆ ಆಯೋಜಿಸಿದ್ದ ಗರ್ಭ ಕಂಠ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಯಾನ್ಸರ್ನ ವಿಧಗಳಲ್ಲಿ ಮಹಿಳೆಯರನ್ನು ಕಾಡುವ ಗರ್ಭ ಕಂಠದ ಕ್ಯಾನ್ಸರ್ ಒಂದು. ಲಸಿಕೆ ಪಡೆಯುವ ಮೂಲಕ ಇದನ್ನು ತಡೆಗಟ್ಟಬಹುದು. 13 ರಿಂದ 26 ವರ್ಷದ ಒಳಗಿನ ಯುವತಿಯರು ಲಸಿಕೆ ಪಡೆಯಬೇಕು ಎಂದು ಸಲಹೆ ಮಾಡಿದರು.<br />ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು ಎಂದರು.<br />ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂ. ಪೂರ್ಣಿಮಾ ಜಿ. ಮಾತನಾಡಿ, ಮಹಿಳೆಯರು ಕ್ಯಾನ್ಸರ್ ಬಗ್ಗೆ ಅರಿಯಬೇಕು. ಕ್ಯಾನ್ಸರ್ ತಡೆಗೆ ಲಸಿಕೆ ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.<br />ಸಂಸ್ಥೆಯ ನಿರ್ದೇಶಕ ಮುನೇಶ್ವರ ಲಾಖಾ ಮಾತನಾಡಿ, ಡಾ. ವಿಪಿನ್ ಗೋಯಲ್ ಬೀದರ್ನವರು. ದೇಶ, ವಿದೇಶದಲ್ಲಿ ಜನ ಮನ್ನಣೆ ಪಡೆದ ಕ್ಯಾನ್ಸರ್ ತಜ್ಞರಲ್ಲಿ ಒಬ್ಬರು. ಅವರು ತವರು ಜಿಲ್ಲೆಯ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.<br />ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯೆ ಸುನೀತಾ ಸ್ವಾಮಿ ಇದ್ದರು. ಸಂಸ್ಥೆಯ ಮಹಿಳಾ ಸಿಬ್ಬಂದಿ, ಜ್ಞಾನಸುಧಾ ವಿದ್ಯಾಲಯ, ಪದವಿಪೂರ್ವ ಕಾಲೇಜು, ಜ್ಞಾನಸುಧಾ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಜ್ಞಾನಸುಧಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>