<p><strong>ಹುಲಸೂರ</strong>: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಸೋಮವಾರ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಎಂ. ಡಿ.ಅರಿಫೋದಿನ ಮಾತನಾಡಿ, ‘ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದರಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಸಾರ್ವಜನಿಕರು ಈ ರೋಗದ ಬಗ್ಗೆ ಜಾಗೃತಿ ವಹಿಸುವ ಮೂಲಕ ಕ್ಯಾನ್ಸರ್ ತಡೆಗಟ್ಟಲು ಸಹಕರಿಸಬೇಕು’ ಎಂದು ಹೇಳಿದರು.</p>.<p>ವಿಶ್ವದಲ್ಲಿ ಒಟ್ಟಾರೆ 2 ಕೋಟಿ ಜನರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಪ್ರತಿ 10 ಮಂದಿಯಲ್ಲಿ ಒಬ್ಬರಿಗೆ ಈ ಕಾಯಿಲೆ ಇದೆ. ಕ್ಯಾನ್ಸರ್ ಗುಣಪಡಿಸಬಹುದಾಗಿದ್ದು, ಇದಕ್ಕೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಪ್ರತಿಯೊಬ್ಬರೂ ಆರೋಗ್ಯಗರ ಜೀವನ ಶೈಲಿ ರೂಢಿಸಿಕೊಳ್ಳುವ ಮೂಲಕ ಕ್ಯಾನ್ಸರ್ನಿಂದ ದೂರ ಇರಬೇಕು ಎಂದು ಹೇಳಿದರು.</p>.<p>ಆಸ್ಪತ್ರೆಯ ಮಕ್ಕಳ ವೈದ್ಯಾಧಿಕಾರಿ ಮಲ್ಲಿಕಾರ್ಜುನ, ಕ್ಯಾನ್ಸರ್ ರೋಗದ ಗುಣಲಕ್ಷಣದ ಬಗ್ಗೆ ಮಾಹಿತಿ ನೀಡಿದರು. ಇದ್ದಕ್ಕಿದ್ದಂತೆ ತೂಕ ಕಡಿಮೆಯಾಗುವುದು, ಸುಸ್ತು, ಕೆಮ್ಮು, ದೀರ್ಘಕಾಲದ ಗಾಯಗಳು, ಕ್ಯಾನ್ಸರ್ ರೋಗದ ಗುಣ ಲಕ್ಷಣಗಳಾಗಿವೆ ಎಂದರು.</p>.<p>ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಕೇಂದ್ರದ ಎನ್ಸಿಡಿ ವಿಭಾಗದ ಡಾ.ಅಬ್ದುಲ್ ಮಾಜಿದ ಹಾಗೂ ದಿಗಬಂರ ಮೇತ್ರೆ ಅವರೂ ರೋಗದ ಚಿಕಿತ್ಸೆ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿ ನೀಡಿದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ಸಂಗೀತಾ ಸುಂಕನಾಳೆ, ಸಚಿನಕುಮಾರ ಹೀರೆಮಣಿ, ರೋಜಲಿನ, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಸೋಮವಾರ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಎಂ. ಡಿ.ಅರಿಫೋದಿನ ಮಾತನಾಡಿ, ‘ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದರಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಸಾರ್ವಜನಿಕರು ಈ ರೋಗದ ಬಗ್ಗೆ ಜಾಗೃತಿ ವಹಿಸುವ ಮೂಲಕ ಕ್ಯಾನ್ಸರ್ ತಡೆಗಟ್ಟಲು ಸಹಕರಿಸಬೇಕು’ ಎಂದು ಹೇಳಿದರು.</p>.<p>ವಿಶ್ವದಲ್ಲಿ ಒಟ್ಟಾರೆ 2 ಕೋಟಿ ಜನರು ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಪ್ರತಿ 10 ಮಂದಿಯಲ್ಲಿ ಒಬ್ಬರಿಗೆ ಈ ಕಾಯಿಲೆ ಇದೆ. ಕ್ಯಾನ್ಸರ್ ಗುಣಪಡಿಸಬಹುದಾಗಿದ್ದು, ಇದಕ್ಕೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಪ್ರತಿಯೊಬ್ಬರೂ ಆರೋಗ್ಯಗರ ಜೀವನ ಶೈಲಿ ರೂಢಿಸಿಕೊಳ್ಳುವ ಮೂಲಕ ಕ್ಯಾನ್ಸರ್ನಿಂದ ದೂರ ಇರಬೇಕು ಎಂದು ಹೇಳಿದರು.</p>.<p>ಆಸ್ಪತ್ರೆಯ ಮಕ್ಕಳ ವೈದ್ಯಾಧಿಕಾರಿ ಮಲ್ಲಿಕಾರ್ಜುನ, ಕ್ಯಾನ್ಸರ್ ರೋಗದ ಗುಣಲಕ್ಷಣದ ಬಗ್ಗೆ ಮಾಹಿತಿ ನೀಡಿದರು. ಇದ್ದಕ್ಕಿದ್ದಂತೆ ತೂಕ ಕಡಿಮೆಯಾಗುವುದು, ಸುಸ್ತು, ಕೆಮ್ಮು, ದೀರ್ಘಕಾಲದ ಗಾಯಗಳು, ಕ್ಯಾನ್ಸರ್ ರೋಗದ ಗುಣ ಲಕ್ಷಣಗಳಾಗಿವೆ ಎಂದರು.</p>.<p>ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಕೇಂದ್ರದ ಎನ್ಸಿಡಿ ವಿಭಾಗದ ಡಾ.ಅಬ್ದುಲ್ ಮಾಜಿದ ಹಾಗೂ ದಿಗಬಂರ ಮೇತ್ರೆ ಅವರೂ ರೋಗದ ಚಿಕಿತ್ಸೆ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿ ನೀಡಿದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ಸಂಗೀತಾ ಸುಂಕನಾಳೆ, ಸಚಿನಕುಮಾರ ಹೀರೆಮಣಿ, ರೋಜಲಿನ, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>