ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನಲ್ಲಿ ಸಾಗಿಸುತ್ತಿದ್ದ ಮದ್ಯ, ಬಿಯರ್ ಬಾಟಲಿ ಜಪ್ತಿ

Last Updated 21 ಮಾರ್ಚ್ 2023, 5:20 IST
ಅಕ್ಷರ ಗಾತ್ರ

ಔರಾದ್: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಗಡಿ ಭಾಗದಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿದ ಅಬಕಾರಿ ಪೊಲೀಸರು ಕಾರಿನಲ್ಲಿ ಸಾಗಿಸುತ್ತಿದ್ದ ಮದ್ಯ ಹಾಗೂ ಬಿಯರ್ ಬಾಟಲಿಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ತೆಲಂಗಾಣದ ಗಡಿಯಲ್ಲಿರುವ ವಡಗಾಂವ್-ಜಮಗಿ ರಸ್ತೆಯ ಮಹಾರಾಜವಾಡಿ ಕ್ರಾಸ್ ಬಳಿ ಮಹಾರಾಷ್ಟ್ರ ಮೂಲದ ಟಾಟಾ ಇಂಡಿಕಾ ಕಾರು ಜಪ್ತಿ ಮಾಡಿಕೊಂಡು ಅದರಲ್ಲಿದ್ದ 168.480 ಲೀಟರ್ ಮದ್ಯ ಹಾಗೂ 39.12 ಲೀಟರ್ ಬಿಯರ್ ಬಾಟಲಿಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಈ ಪ್ರಕರಣದ ಆರೋಪಿ ಬಾಲಾಜಿ ಜಾಧವ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಅಬಕಾರಿ ಇಲಾಖೆ ಮೇಲಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಅಬಕಾರಿ ಉಪ ನಿರೀಕ್ಷಕರಾದ ದಿಲೀಪಸಿಂಗ್ ಠಾಕೂರ್ ಹಾಗೂ ರಾಜಕುಮಾರ, ಅಬ್ದುಲ್ ಅತಿಕ್ ಹಾಗೂ ಇತರೆ ಸಿಬ್ಬಂದಿ ದಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂ ಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT