ಬಸವಕಲ್ಯಾಣ: ಇಲ್ಲಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕಾರು ಪಲ್ಟಿ ಆಗಿದ್ದರಿಂದ ಹೈದರಾಬಾದ್ ಮೂಲದ ಜಾಫರ್ (24) ಎಂಬುವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿವೆ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಆತ್ಮಹತ್ಯೆ
ಬಸವಕಲ್ಯಾಣ: ತಾಲ್ಲೂಕಿನ ಚಿಟ್ಟಾ(ಕೆ) ಗ್ರಾಮದಲ್ಲಿ ರಾಜಕುಮಾರ ರಾಮತಿರೆ(45) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿಕೆಪಿಎಸ್ ಹಾಗೂ ಇತರೆ ಬ್ಯಾಂಕ್ಗಳಲ್ಲಿ ಸುಮಾರು ₹ 2 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರಿಂದ ಅದನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಬ್ ಇನ್ಸ್ಪೆಕ್ಟರ್ ಜಯಶ್ರೀ ಹೂಡಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.