ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು: ಮಹಿಳೆ ಸಜೀವ ದಹನ

Last Updated 5 ಡಿಸೆಂಬರ್ 2019, 7:10 IST
ಅಕ್ಷರ ಗಾತ್ರ

ಚಿಟಗುಪ್ಪ (ಬೀದರ್ ಜಿಲ್ಲೆ): ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ತೆರಳುತ್ತಿದ ಕಾರಿಗೆ ಬೆಂಕಿಹೊತ್ತಿಕೊಂಡು, ಕಾರಿನಲ್ಲಿದ ಮಹಿಳೆಯೊಬ್ಬರು ಸಜೀವ ದಹನಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಹಿಳೆಯ ಪತಿ ಹಾಗೂ ಪುತ್ರ ಆಶ್ಚರ್ಯಕರ ರೀತಿಯಲ್ಲಿ ಪಾರಾರಿದ್ದಾರೆ.

ಹೈದರಾಬಾದ್‌ನ ಕಲ್ಯಾಣಿ ಉದಯಕುಮಾರ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಯಾಣಿಯ ಪತಿ ಉದಯಕುಮಾರ ಹಾಗೂ ಪುತ್ರ ಗಗನಕುಮಾರ ಉದಯಕುಮಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಹಾರಾಷ್ಟ್ರದ ಉದಗಿರನ ಖಾಸಗಿ ಆಸ್ಪತ್ರೆಗೆ ಹೋಗಿ ಹೈದರಾಬಾದ್‌ಗೆ ಮರಳುತ್ತಿದ್ದಾಗ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಹೊರವಲಯದಲ್ಲಿ ಅವಘಡ ಸಂಭವಿಸಿದೆ.

ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT