ಚಿಟಗುಪ್ಪ (ಬೀದರ್ ಜಿಲ್ಲೆ): ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ತೆರಳುತ್ತಿದ ಕಾರಿಗೆ ಬೆಂಕಿಹೊತ್ತಿಕೊಂಡು, ಕಾರಿನಲ್ಲಿದ ಮಹಿಳೆಯೊಬ್ಬರು ಸಜೀವ ದಹನಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಹಿಳೆಯ ಪತಿ ಹಾಗೂ ಪುತ್ರ ಆಶ್ಚರ್ಯಕರ ರೀತಿಯಲ್ಲಿ ಪಾರಾರಿದ್ದಾರೆ.
ಹೈದರಾಬಾದ್ನ ಕಲ್ಯಾಣಿ ಉದಯಕುಮಾರ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಯಾಣಿಯ ಪತಿ ಉದಯಕುಮಾರ ಹಾಗೂ ಪುತ್ರ ಗಗನಕುಮಾರ ಉದಯಕುಮಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಹಾರಾಷ್ಟ್ರದ ಉದಗಿರನ ಖಾಸಗಿ ಆಸ್ಪತ್ರೆಗೆ ಹೋಗಿ ಹೈದರಾಬಾದ್ಗೆ ಮರಳುತ್ತಿದ್ದಾಗ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಹೊರವಲಯದಲ್ಲಿ ಅವಘಡ ಸಂಭವಿಸಿದೆ.
ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.