<p><strong>ಬೀದರ್</strong>: ‘ಜಾತಿ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತರು ಯಾರೂ ಹಿಂದೂ ಎಂದು ಬರೆಸಬಾರದು’ ಎಂದು ಈಶ್ವರ ಖಂಡ್ರೆ ಹೇಳಿರುವುದು ಖಂಡನೀಯ’ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ಇಷ್ಟು ವರ್ಷ ಹಿಂದೂ ಎಂದು ಬರೆಯಿಸಿದಾಗ ಆಗದ ತೊಂದರೆ ಈಗ ಏಕೆ ಆಗುತ್ತಿದೆ ಎಂದು ಪ್ರಶ್ನಿಸಿದರು. ತಕ್ಷಣ ರಾಜ್ಯದ ಜನರಿಗೆ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ವೀರಶೈವ ಲಿಂಗಾಯತರು ಹಿಂದೂ ಎಂದು ಬರೆಯಿಸಬೇಡಿ’ ಎನ್ನುವುದಕ್ಕೆ ನನ್ನ ಆಕ್ಷೇಪವಿದೆ, ಈಶ್ವರ ಖಂಡ್ರೆ ಇಂತಹ ಹೇಳಿಕೆ ನೀಡಿ ರಾಜಕೀಯ ಬೇಳೆ ಬೆಯಿಸಿಕೊಳ್ಳಲು, ಲಿಂಗಾಯತ–ವೀರಶೈವ ಲಿಂಗಾಯತರ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮ್ಯನವರೂ ಇದನ್ನೇ ಮಾಡಿದ್ದರು. ಇವರ ಹೇಳಿಕೆಯಿಂದ ಹಿಂದೂ ಸಮಾಜವನ್ನು ಅವಮಾನಿಸಿದಂತಾಗಿದೆ. ರಾಜ್ಯದ ಎಲ್ಲಾ ಹಿಂದೂ ಮುಖಂಡರು, ಬಿಜೆಪಿ ನಾಯಕರು, ಗುರುಗಳು, ಧರ್ಮ ಪ್ರಚಾರಕರು ಇದನ್ನು ಖಂಡಿಸಬೇಕು. ಹಿಂದೂಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು’ ಎಂದು ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಜಾತಿ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತರು ಯಾರೂ ಹಿಂದೂ ಎಂದು ಬರೆಸಬಾರದು’ ಎಂದು ಈಶ್ವರ ಖಂಡ್ರೆ ಹೇಳಿರುವುದು ಖಂಡನೀಯ’ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ಇಷ್ಟು ವರ್ಷ ಹಿಂದೂ ಎಂದು ಬರೆಯಿಸಿದಾಗ ಆಗದ ತೊಂದರೆ ಈಗ ಏಕೆ ಆಗುತ್ತಿದೆ ಎಂದು ಪ್ರಶ್ನಿಸಿದರು. ತಕ್ಷಣ ರಾಜ್ಯದ ಜನರಿಗೆ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ವೀರಶೈವ ಲಿಂಗಾಯತರು ಹಿಂದೂ ಎಂದು ಬರೆಯಿಸಬೇಡಿ’ ಎನ್ನುವುದಕ್ಕೆ ನನ್ನ ಆಕ್ಷೇಪವಿದೆ, ಈಶ್ವರ ಖಂಡ್ರೆ ಇಂತಹ ಹೇಳಿಕೆ ನೀಡಿ ರಾಜಕೀಯ ಬೇಳೆ ಬೆಯಿಸಿಕೊಳ್ಳಲು, ಲಿಂಗಾಯತ–ವೀರಶೈವ ಲಿಂಗಾಯತರ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮ್ಯನವರೂ ಇದನ್ನೇ ಮಾಡಿದ್ದರು. ಇವರ ಹೇಳಿಕೆಯಿಂದ ಹಿಂದೂ ಸಮಾಜವನ್ನು ಅವಮಾನಿಸಿದಂತಾಗಿದೆ. ರಾಜ್ಯದ ಎಲ್ಲಾ ಹಿಂದೂ ಮುಖಂಡರು, ಬಿಜೆಪಿ ನಾಯಕರು, ಗುರುಗಳು, ಧರ್ಮ ಪ್ರಚಾರಕರು ಇದನ್ನು ಖಂಡಿಸಬೇಕು. ಹಿಂದೂಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕು’ ಎಂದು ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>