<p><strong>ಬೀದರ್:</strong> ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಭಕ್ತರು ಈ ಬಾರಿ ಗುರುಪೂರ್ಣಿಮೆ ಮನೆಯಲ್ಲೇ ಆಚರಿಸಬೇಕು ಎಂದು ನೆರೆಯ ತೆಲಂಗಾಣದ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಡಾ. ಬಸವಲಿಂಗ ಅವಧೂತರು ಹೇಳಿದ್ದಾರೆ.</p>.<p>ಜುಲೈ 5 ರಂದು ಗುರುಪೂರ್ಣಿಮೆ ಇದೆ. ಬಹಳಷ್ಟು ಭಕ್ತರು ಗುರುಗಳಿಗೆ ಗೌರವ ಸಲ್ಲಿಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಆದರೆ, ಕೊರೊನಾ ಸೋಂಕು ತಡೆಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಅವರವರ ಮನೆಗಳಲ್ಲೇ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.</p>.<p>ಭಕ್ತರು ಕೊರೊನಾ ಮುಕ್ತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು. ಬರುವ ದಿನಗಳಲ್ಲಿ ದೇವರು ಮಹಾಮಾರಿ ಕೊರೊನಾದ ಸಂಕಟವನ್ನು ನಿವಾರಿಸಲಿದ್ದಾನೆ ಎಂದು ಹೇಳಿದ್ದಾರೆ.</p>.<p>ಕೊರೊನಾ ನಿಯಂತ್ರಿಸಲು ಕೇಂದ್ರ ಹಾಗೂ ಆಯಾ ರಾಜ್ಯ ಸರ್ಕಾರಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸೋಂಕಿಗೆ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಲಸಿಕೆ ಸಂಶೋಧನೆಯೂ ತೀವ್ರಗತಿಯಲ್ಲಿ ನಡೆದಿದೆ. ಅದು ಬರುವವರೆಗೂ ಹೆಚ್ಚು ಎಚ್ಚರ ವಹಿಸಬೇಕು. ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಸಲಹೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಭಕ್ತರು ಈ ಬಾರಿ ಗುರುಪೂರ್ಣಿಮೆ ಮನೆಯಲ್ಲೇ ಆಚರಿಸಬೇಕು ಎಂದು ನೆರೆಯ ತೆಲಂಗಾಣದ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಡಾ. ಬಸವಲಿಂಗ ಅವಧೂತರು ಹೇಳಿದ್ದಾರೆ.</p>.<p>ಜುಲೈ 5 ರಂದು ಗುರುಪೂರ್ಣಿಮೆ ಇದೆ. ಬಹಳಷ್ಟು ಭಕ್ತರು ಗುರುಗಳಿಗೆ ಗೌರವ ಸಲ್ಲಿಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಆದರೆ, ಕೊರೊನಾ ಸೋಂಕು ತಡೆಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಅವರವರ ಮನೆಗಳಲ್ಲೇ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.</p>.<p>ಭಕ್ತರು ಕೊರೊನಾ ಮುಕ್ತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು. ಬರುವ ದಿನಗಳಲ್ಲಿ ದೇವರು ಮಹಾಮಾರಿ ಕೊರೊನಾದ ಸಂಕಟವನ್ನು ನಿವಾರಿಸಲಿದ್ದಾನೆ ಎಂದು ಹೇಳಿದ್ದಾರೆ.</p>.<p>ಕೊರೊನಾ ನಿಯಂತ್ರಿಸಲು ಕೇಂದ್ರ ಹಾಗೂ ಆಯಾ ರಾಜ್ಯ ಸರ್ಕಾರಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸೋಂಕಿಗೆ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಲಸಿಕೆ ಸಂಶೋಧನೆಯೂ ತೀವ್ರಗತಿಯಲ್ಲಿ ನಡೆದಿದೆ. ಅದು ಬರುವವರೆಗೂ ಹೆಚ್ಚು ಎಚ್ಚರ ವಹಿಸಬೇಕು. ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಸಲಹೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>