ಗುರುದ್ವಾರ ಶ್ರೀ ನಾನಕ್ ಝೀರಾ ಪ್ರಬಂಧಕ ಕಮಿಟಿ ಅಧ್ಯಕ್ಷ ಸರ್ದಾರ್ ಬಲಬೀರ್ ಸಿಂಗ್, ಕಮಿಟಿ ಸದಸ್ಯರು, ಸಿಖ್ ಮುಖಂಡರು ಪಾಲ್ಗೊಂಡಿದ್ದರು. ಗುರುನಾನಕ ಆಸ್ಪತ್ರೆಯ ಮುಂಭಾಗದ ರಸ್ತೆ ಬದಿಯಲ್ಲಿ ಕುಳಿತು ಕೆಲವರು ಧಾರ್ಮಿಕ ಚಿಹ್ನೆವುಳ್ಳ ಸಾಮಗ್ರಿ, ಚಿಕ್ಕದಾದ ಖಡ್ಗ ಹಾಗೂ ಆಟಿಕೆ ಸಾಮಾನುಗಳನ್ನು ಮಾರಾಟ ಮಾಡಿದರು. ಆವರಣದಲ್ಲಿ ಹೆಚ್ಚಿನ ಜನ ಸೇರಿದ್ದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.