ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಸಂಜೀವಕುಮಾರ ಸ್ವಾಮಿ, ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ಸದಸ್ಯ ವೀರಭದ್ರಪ್ಪ ಉಪ್ಪಿನ್ ಮಾತನಾಡಿದರು. ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆ ಅರವಿಂದ ಕುಲಕರ್ಣಿ ಸ್ವರಚಿತ ಕವನ ವಾಚನ ಮಾಡಿದರು.
ಮುಖ್ಯ ಶಿಕ್ಷಕಿ ಪಾರ್ವತಿ ಲಕ್ಷ್ಮಮಾಜಿ ಅಧ್ಯಕ್ಷತೆ ವಹಿಸಿದ್ದರು. ಮಂದಾಕಿನಿ ಉಪ್ಪಿನ್, ಮಾಲಾಶ್ರೀ ಹೆಡಗಾಪುರ, ಈರಮ್ಮ, ಲಕ್ಷ್ಮಿ ಇದ್ದರು. ಮಾಲಾಶ್ರೀ ಸ್ವಾಗತಿಸಿದರು. ಶಿಕ್ಷಕ ಸಂಗ್ರಾಮ ಚಾಮ ವಂದಿಸಿದರು.