ಬೀದರ್: ಸರ್ಕಾರ ಹದಿಹರೆಯದ ಹೆಣ್ಣುಮಕ್ಕಳಿಗೆ ಗರ್ಭಕೋಶ ಕ್ಯಾನ್ಸರ್ ತಡೆ ಲಸಿಕೆ ಉಚಿತವಾಗಿ ಕೊಡಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬೀದರ್ ಘಟಕದ ಅಧ್ಯಕ್ಷ ಡಾ. ಸಿ.ಆನಂದರಾವ್ ಒತ್ತಾಯಿಸಿದರು.
ಇಲ್ಲಿಯ ಭಾರತೀಯ ಕುಟುಂಬ ಯೋಜನಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಚಿತ ಲಸಿಕೆ ಕೊಡುವ ಸಂಬಂಧ ವೈದ್ಯಾಧಿಕಾರಿಗಳ ಸಂಘಗಳು ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಹೇಳಿದರು.
ವೈದ್ಯರು ರೋಗಿಗಳನ್ನು ಉಪಚರಿಸುತ್ತಾರೆ. ಅವರ ಜೀವ ಉಳಿಸಲು ಪ್ರಯತ್ನಿಸುತ್ತಾರೆ. ಕಾರಣ, ವೈದ್ಯರನ್ನು ಎಲ್ಲರೂ ಗೌರವಿಸಬೇಕು ಎಂದು ತಿಳಿಸಿದರು.
ಸಂಘದ ಬೀದರ್ ಶಾಖೆ ಅಧ್ಯಕ್ಷ ಡಾ. ನಾಗೇಶ ಪಾಟೀಲ, ಗೌರವ ಖಜಾಂಟಿ ಡಾ.ವಿಜಯ ಕೊಂಡಾ, ಮಾಜಿ ಅಧ್ಯಕ್ಷೆ ಡಾ.ವಿಜಯಶ್ರೀ ಬಶೆಟ್ಟಿ, ಕಾರ್ಯಕಾರಿಣಿ ಸದಸ್ಯರಾದ ಡಾ.ಎ.ಸಿ. ಲಲಿತಮ್ಮ ಮಾತನಾಡಿದರು.