<p><strong>ಕಮಲನಗರ: </strong>ವಿವಿಧತೆಯಲ್ಲಿ ಏಕತೆಯನ್ನು ಕಂಡ ಭಾರತ ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವ ಪ್ರಶ್ನೆಯೇ ಉದ್ಭವಿಸದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ತಾಲ್ಲೂಕಿನ ಹೊಳಸಮುದ್ರ ಗ್ರಾಮದಲ್ಲಿ ಬುಧವಾರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಸಿಎಎ ಜಾಗೃತಿ ಸಭೆಯಲ್ಲಿ ಚಾಯ್ ಪೆ ಚರ್ಚಾದಲ್ಲಿ ಮಾತನಾಡಿದರು.</p>.<p>ದೇಶದಲ್ಲಿ 1955ರಲ್ಲಿ ಪೌರತ್ವ ಕಾಯ್ದೆ ಜಾರಿಗೆ ಬಂದಿದ್ದು, ಹಂತ-ಹಂತವಾಗಿ ತಿದ್ದುಪಡಿಯಾಗುತ್ತಲೇ ಇದೆ. ಮುಸ್ಲಿಮರ ಪೌರತ್ವ ಕಿತ್ತುಕೊಳ್ಳಲಾಗುತ್ತದೆ. ಇಲ್ಲವೇ ಅವರನ್ನು ನುಸಳು ಕೋರರೆಂದು ತೀರ್ಮಾನಿಸಲಾಗುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ವೋಟ್ ಬ್ಯಾಂಕ್ ಗಿಮಿಕ್ ಮಾಡುತ್ತಿವೆ. ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ತೊಂದರೆ ಇಲ್ಲ ಎಂದರು.</p>.<p>ದೇಶ ಜಾತ್ಯತೀತ ರಾಷ್ಟ್ರವಾಗಿದ್ದು ಇದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಸ್ಲಿಮರಿಗೆ ಪ್ರಧಾನಿ ನರೇಂದ್ರ ಮೋದಿ, ಗ್ರಹ ಸಚಿವ ಅಮಿತ ಶಾ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.</p>.<p>ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭರತ ಕದಂ, ಮುಖಂಡ ಜ್ಞಾನೇಶ್ವರ ಪಾಟೀಲ್, ದೀಲಿಪ ಚವಾಣ್, ಶೇಖ ಸಹ್ಮದ್, ವಿಷ್ಣು, ಜಾವೇದ್, ಭೀಮಶಾ, ಸಚೀನ ರಾಠೋಡ್ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ: </strong>ವಿವಿಧತೆಯಲ್ಲಿ ಏಕತೆಯನ್ನು ಕಂಡ ಭಾರತ ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವ ಪ್ರಶ್ನೆಯೇ ಉದ್ಭವಿಸದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.</p>.<p>ತಾಲ್ಲೂಕಿನ ಹೊಳಸಮುದ್ರ ಗ್ರಾಮದಲ್ಲಿ ಬುಧವಾರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಸಿಎಎ ಜಾಗೃತಿ ಸಭೆಯಲ್ಲಿ ಚಾಯ್ ಪೆ ಚರ್ಚಾದಲ್ಲಿ ಮಾತನಾಡಿದರು.</p>.<p>ದೇಶದಲ್ಲಿ 1955ರಲ್ಲಿ ಪೌರತ್ವ ಕಾಯ್ದೆ ಜಾರಿಗೆ ಬಂದಿದ್ದು, ಹಂತ-ಹಂತವಾಗಿ ತಿದ್ದುಪಡಿಯಾಗುತ್ತಲೇ ಇದೆ. ಮುಸ್ಲಿಮರ ಪೌರತ್ವ ಕಿತ್ತುಕೊಳ್ಳಲಾಗುತ್ತದೆ. ಇಲ್ಲವೇ ಅವರನ್ನು ನುಸಳು ಕೋರರೆಂದು ತೀರ್ಮಾನಿಸಲಾಗುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ವೋಟ್ ಬ್ಯಾಂಕ್ ಗಿಮಿಕ್ ಮಾಡುತ್ತಿವೆ. ಕಾಯ್ದೆಯಿಂದ ದೇಶದ ಮುಸ್ಲಿಮರಿಗೆ ತೊಂದರೆ ಇಲ್ಲ ಎಂದರು.</p>.<p>ದೇಶ ಜಾತ್ಯತೀತ ರಾಷ್ಟ್ರವಾಗಿದ್ದು ಇದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಸ್ಲಿಮರಿಗೆ ಪ್ರಧಾನಿ ನರೇಂದ್ರ ಮೋದಿ, ಗ್ರಹ ಸಚಿವ ಅಮಿತ ಶಾ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.</p>.<p>ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭರತ ಕದಂ, ಮುಖಂಡ ಜ್ಞಾನೇಶ್ವರ ಪಾಟೀಲ್, ದೀಲಿಪ ಚವಾಣ್, ಶೇಖ ಸಹ್ಮದ್, ವಿಷ್ಣು, ಜಾವೇದ್, ಭೀಮಶಾ, ಸಚೀನ ರಾಠೋಡ್ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>