<p>ಜನವಾಡ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮಸ್ಥರು ಮಂಗಳವಾರ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಬೆಳಿಗ್ಗೆ ಪಂಚಾಯಿತಿ ಎದುರು ಜಮಾಯಿಸಿದ ಗ್ರಾಮಸ್ಥರು ಕಚೇರಿಗೆ ಬೀಗ ಜಡಿದರು. ಬಳಿಕ ಮಧ್ಯಾಹ್ನದ ವರೆಗೂ ಪಂಚಾಯಿತಿ ಎದುರು ಧರಣಿ ನಡೆಸಿದರು.</p>.<p>ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜನವಾಡ ಪೊಲೀಸರು ಬೀಗ ತೆಗೆಯಲು ಸೂಚಿಸಿದಾಗ ಗ್ರಾಮಸ್ಥರು ನಿರಾಕರಿಸಿದರು. ಆಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಕೆಲವರ ಮೇಲೆ ಬೆತ್ತ ಪ್ರಹಾರವನ್ನೂ ಮಾಡಿದರು. ನಂತರ ಪ್ರತಿಭಟನಾಕಾರರು ಬೀಗ ತೆರವುಗೊಳಿಸಿದರು.</p>.<p>‘ಗ್ರಾಮದಲ್ಲಿ ಎರಡು ಕೊಳವೆಬಾವಿಗಳು ಇವೆ. ಮೋಟಾರ್ ಸುಟ್ಟು ಹೋಗಿರುವ ಕಾರಣ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ’ ಎಂದು ಪ್ರತಿಭಟನೆ ಮುಂದಾಳತ್ವ ವಹಿಸಿದ್ದ ರವೀಂದ್ರ ದೇಸಾಯಿ ಹೇಳಿದರು.</p>.<p>‘ಜನ ಕಾಲ್ನಡಿಗೆ, ಸೈಕಲ್, ಬೈಕ್ ಹಾಗೂ ಆಟೊಗಳಲ್ಲಿ ದೂರದ ಹೊಲಗಳು ಹಾಗೂ ಹಳ್ಳಕ್ಕೆ ಹೋಗಿ ನೀರು ತರುತ್ತಿದ್ದಾರೆ. ಗ್ರಾಮಸ್ಥರಿಗೆ ಸದ್ಯ ನೀರು ತುಂಬುವುದೇ ದೊಡ್ಡ ಕೆಲಸವಾಗಿದೆ’ ಎಂದು ತಿಳಿಸಿದರು.</p>.<p>‘ಕುಡಿಯುವ ನೀರಿನ ಬವಣೆ ತಪ್ಪಿಸಲು ಆಗ್ರಹಿಸಿ ನಾಲ್ಕು ದಿನಗಳ ಹಿಂದೆ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ್ದಾಗ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಗ್ರಾಮಕ್ಕೆ ಭೇಟಿ ನೀಡಿದ್ದರು. ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೂ, ಪ್ರಯೋಜನವಾಗದ ಕಾರಣ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗಿದೆ’ ಎಂದು ಹೇಳಿದರು.</p>.<p>ಜನವಾಡ ಪಿಎಸ್ಐ ಹಾಗೂ ಪಂಚಾಯಿತಿ ಕಾರ್ಯದರ್ಶಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವ ಭರವಸೆ ನೀಡಿದ್ದಾರೆ. ಶೀಘ್ರ ಕುಡಿಯುವ ನೀರಿನ ವ್ಯವಸ್ಥೆ ಆಗದಿದ್ದರೆ ಮತ್ತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಗ್ರಾಮದ ಪ್ರಮುಖರಾದ ಸುಭಾಷ ಪಾಟೀಲ, ದಿಗಂಬರ ಪಾಟೀಲ, ಉಮೇಶ ಬಿರಾದಾರ, ಶ್ರೀಮಂತ ಪಾಟೀಲ, ಧನರಾಜ ಪಾಟೀಲ, ಹಣಮಂತರಾವ್ ರೊಡ್ಡಾ, ಶಿವರಾಜ ಕೋಳಿ, ಗಣಪತಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜನವಾಡ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮಸ್ಥರು ಮಂಗಳವಾರ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಬೆಳಿಗ್ಗೆ ಪಂಚಾಯಿತಿ ಎದುರು ಜಮಾಯಿಸಿದ ಗ್ರಾಮಸ್ಥರು ಕಚೇರಿಗೆ ಬೀಗ ಜಡಿದರು. ಬಳಿಕ ಮಧ್ಯಾಹ್ನದ ವರೆಗೂ ಪಂಚಾಯಿತಿ ಎದುರು ಧರಣಿ ನಡೆಸಿದರು.</p>.<p>ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜನವಾಡ ಪೊಲೀಸರು ಬೀಗ ತೆಗೆಯಲು ಸೂಚಿಸಿದಾಗ ಗ್ರಾಮಸ್ಥರು ನಿರಾಕರಿಸಿದರು. ಆಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಕೆಲವರ ಮೇಲೆ ಬೆತ್ತ ಪ್ರಹಾರವನ್ನೂ ಮಾಡಿದರು. ನಂತರ ಪ್ರತಿಭಟನಾಕಾರರು ಬೀಗ ತೆರವುಗೊಳಿಸಿದರು.</p>.<p>‘ಗ್ರಾಮದಲ್ಲಿ ಎರಡು ಕೊಳವೆಬಾವಿಗಳು ಇವೆ. ಮೋಟಾರ್ ಸುಟ್ಟು ಹೋಗಿರುವ ಕಾರಣ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ’ ಎಂದು ಪ್ರತಿಭಟನೆ ಮುಂದಾಳತ್ವ ವಹಿಸಿದ್ದ ರವೀಂದ್ರ ದೇಸಾಯಿ ಹೇಳಿದರು.</p>.<p>‘ಜನ ಕಾಲ್ನಡಿಗೆ, ಸೈಕಲ್, ಬೈಕ್ ಹಾಗೂ ಆಟೊಗಳಲ್ಲಿ ದೂರದ ಹೊಲಗಳು ಹಾಗೂ ಹಳ್ಳಕ್ಕೆ ಹೋಗಿ ನೀರು ತರುತ್ತಿದ್ದಾರೆ. ಗ್ರಾಮಸ್ಥರಿಗೆ ಸದ್ಯ ನೀರು ತುಂಬುವುದೇ ದೊಡ್ಡ ಕೆಲಸವಾಗಿದೆ’ ಎಂದು ತಿಳಿಸಿದರು.</p>.<p>‘ಕುಡಿಯುವ ನೀರಿನ ಬವಣೆ ತಪ್ಪಿಸಲು ಆಗ್ರಹಿಸಿ ನಾಲ್ಕು ದಿನಗಳ ಹಿಂದೆ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ್ದಾಗ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಗ್ರಾಮಕ್ಕೆ ಭೇಟಿ ನೀಡಿದ್ದರು. ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೂ, ಪ್ರಯೋಜನವಾಗದ ಕಾರಣ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗಿದೆ’ ಎಂದು ಹೇಳಿದರು.</p>.<p>ಜನವಾಡ ಪಿಎಸ್ಐ ಹಾಗೂ ಪಂಚಾಯಿತಿ ಕಾರ್ಯದರ್ಶಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವ ಭರವಸೆ ನೀಡಿದ್ದಾರೆ. ಶೀಘ್ರ ಕುಡಿಯುವ ನೀರಿನ ವ್ಯವಸ್ಥೆ ಆಗದಿದ್ದರೆ ಮತ್ತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಗ್ರಾಮದ ಪ್ರಮುಖರಾದ ಸುಭಾಷ ಪಾಟೀಲ, ದಿಗಂಬರ ಪಾಟೀಲ, ಉಮೇಶ ಬಿರಾದಾರ, ಶ್ರೀಮಂತ ಪಾಟೀಲ, ಧನರಾಜ ಪಾಟೀಲ, ಹಣಮಂತರಾವ್ ರೊಡ್ಡಾ, ಶಿವರಾಜ ಕೋಳಿ, ಗಣಪತಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>