ಜಾನಪದ ಕಲಾವಿದ ಶಂಕರ ಚೊಂಡಿ ಮಾತನಾಡಿ, ‘ಪ್ರತಿಸ್ಪರ್ಧಿ ಗುಂಪಿನ ನೇತೃತ್ವ ವಹಿಸಿಕೊಂಡಿರುವ ವ್ಯಕ್ತಿ ಬಸವ ಉತ್ಸವದಲ್ಲಿ ಕಲಾವಿದರ ಹೆಸರಲ್ಲಿ ಹಣ ದೋಚಿದ್ದಾರೆ. ಜಾನಪದ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರಿಗೆ ಅರ್ಧ ವೇತನ ನೀಡಿ ಅನ್ಯಾಯ ಮಾಡಲಾಗುತ್ತಿದೆ. ಆದ್ದರಿಂದ ಕಸಾಪ ಚುನಾವಣೆಯಲ್ಲಿ ಮತದಾರರು ಎಚ್ಚರಿಕೆಯಿಂದ ಮತ ಹಾಕಬೇಕು’ ಎಂದು ಮನವಿ ಮಾಡಿದರು.