ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಂಜ್ರಾ ನದಿಗೆ ನೀರು ಹರಿಸಲು ಚವಾಣ್ ಸೂಚನೆ

Last Updated 26 ಮಾರ್ಚ್ 2021, 15:53 IST
ಅಕ್ಷರ ಗಾತ್ರ

ಬೀದರ್: ಔರಾದ್ ತಾಲ್ಲೂಕಿನ ಸಂಗಮ, ಹಾಲಹಳ್ಳಿ, ಕಂದಗೂಳ ಹಾಗೂ ಇತರ ಗ್ರಾಮಗಳಲ್ಲಿ ನೀರಿನ ತೀವ್ರ ಸಮಸ್ಯೆ ಇರುವ ಕಾರಣ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೇಸಿಗೆ ಆರಂಭವಾಗಿದೆ. ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ದೂರುಗಳು ಬರುತ್ತಿವೆ. ಯಾವ ಗ್ರಾಮದಲ್ಲೂ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಮೋಟಾರ್ ಕೆಟ್ಟು ಹೋಗುವುದು, ವಿದ್ಯುತ್ ಪರಿಕರಗಳ ಹಾನಿಯಂತಹ ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬೇಕು. ನೀರಿನ ಸಂಪನ್ಮೂಲ ಇರುವ ಗ್ರಾಮಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಜಲಮೂಲ ಇಲ್ಲದ ಕಡೆಗಳಲ್ಲಿ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT