ಅರಣ್ಯಾಧಿಕಾರಿ ಬಸವರಾಜ ಡಾಂಗೆ ಮಾತನಾಡಿ,‘ಚಿರತೆ ಹೆಚ್ಚಾಗಿ ನಾಯಿಗಳ ಮೇಲೆ ದಾಳಿ ಮಾಡುತ್ತದೆ. ಪ್ರಾಣಿಗಳ ದೇಹದ ಹಿಂಭಾಗ ತಿನ್ನುತ್ತದೆ. ಜನ ಚಿರತೆ ಇದೆ ಎಂದು ತಿಳಿಸಿದ್ದಾರೆ. ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗ್ರಾಮದಲ್ಲಿ ಮೂರು ಸಿ.ಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಬೋನು ಇಟ್ಟು ಸೆರೆ ಹಿಡಿಯಲಾಗುವುದು’ ಎಂದು ತಿಳಿಸಿದರು.