<p><strong>ಭಾಲ್ಕಿ:</strong> ‘ಶಿವಾಜಿ ಮಹಾರಾಜರು ಅಪ್ಪಟ ದೇಶಪ್ರೇಮಿ, ಮಹಾನ್ ಪರಾಕ್ರಮಿ ಆಗಿದ್ದರು’ ಎಂದು ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು.</p>.<p>ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಬೀದರ್ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಶಿವಾಜಿ ಈ ದೇಶ ಕಂಡ ಮಹಾನ್ ಹೋರಾಟಗಾರ. ಅವರು ಹೆಸರು ಕೇಳಿದರೆ ವೈರಿಗಳ ಎದೆ ನಡುಗುತ್ತಿತ್ತು. ಅಂಥ ವೀರರು ಜನಿಸಿದ್ದು ಈ ನೆಲದ ಭಾಗ್ಯವಾಗಿದೆ’ ಎಂದರು.</p>.<p>ಕುಲಸಚಿವೆ (ಆಡಳಿತ) ಸುರೇಖಾ ಮಾತನಾಡಿ,‘ಇಂದಿನ ಯುವಕರಿಗೆ ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಶೌರ್ಯ, ಸಾಹಸ, ಪರಾಕ್ರಮಗಳು ಆದರ್ಶವಾಗಬೇಕು. ಆರೋಗ್ಯವಂತ ಸಮರ್ಥ ದೇಶದ ನಿರ್ಮಾಣದಲ್ಲಿ ಶಿವಾಜಿ ಮಹಾರಾಜರ ಜೀವನ ಹಾಗೂ ಸಾಧನೆ ಅಜರಾಮರವಾಗಿದೆ’ ಎಂದರು.</p>.<p>ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಶಾಂತಲಿಂಗ ಸಾವಳಗಿ, ಜಿಲ್ಲಾ ಅಬಕಾರಿ ಆಯುಕ್ತ ರವಿಶಂಕರ.ಎ., ವಿಶೇಷಾಧಿಕಾರಿ ರವೀಂದ್ರನಾಥ ವಿ.ಗಬಾಡಿ ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ‘ಶಿವಾಜಿ ಮಹಾರಾಜರು ಅಪ್ಪಟ ದೇಶಪ್ರೇಮಿ, ಮಹಾನ್ ಪರಾಕ್ರಮಿ ಆಗಿದ್ದರು’ ಎಂದು ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು.</p>.<p>ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಬೀದರ್ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಶಿವಾಜಿ ಈ ದೇಶ ಕಂಡ ಮಹಾನ್ ಹೋರಾಟಗಾರ. ಅವರು ಹೆಸರು ಕೇಳಿದರೆ ವೈರಿಗಳ ಎದೆ ನಡುಗುತ್ತಿತ್ತು. ಅಂಥ ವೀರರು ಜನಿಸಿದ್ದು ಈ ನೆಲದ ಭಾಗ್ಯವಾಗಿದೆ’ ಎಂದರು.</p>.<p>ಕುಲಸಚಿವೆ (ಆಡಳಿತ) ಸುರೇಖಾ ಮಾತನಾಡಿ,‘ಇಂದಿನ ಯುವಕರಿಗೆ ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಶೌರ್ಯ, ಸಾಹಸ, ಪರಾಕ್ರಮಗಳು ಆದರ್ಶವಾಗಬೇಕು. ಆರೋಗ್ಯವಂತ ಸಮರ್ಥ ದೇಶದ ನಿರ್ಮಾಣದಲ್ಲಿ ಶಿವಾಜಿ ಮಹಾರಾಜರ ಜೀವನ ಹಾಗೂ ಸಾಧನೆ ಅಜರಾಮರವಾಗಿದೆ’ ಎಂದರು.</p>.<p>ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಶಾಂತಲಿಂಗ ಸಾವಳಗಿ, ಜಿಲ್ಲಾ ಅಬಕಾರಿ ಆಯುಕ್ತ ರವಿಶಂಕರ.ಎ., ವಿಶೇಷಾಧಿಕಾರಿ ರವೀಂದ್ರನಾಥ ವಿ.ಗಬಾಡಿ ಸೇರಿದಂತೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>