<p>ಬೀದರ್: ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ. ಇದನ್ನು ತಡೆಯಬೇಕಾದರೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ’ ಎಂದು ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ನರಸಪ್ಪ ತಿಳಿಸಿದರು.</p>.<p>ನಗರದ ಆರ್.ವಿ.ಬಿಡಪ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಬುಧವಾರ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಮಕ್ಕಳ ಶಿಕ್ಷಣದ ಮಹತ್ವ ಕುರಿತು ಸಮಾಜದಲ್ಲಿ ಅರಿವು ಮೂಡಿಸಬೇಕಿದೆ. ಶಿಕ್ಷಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡರೆ ಸಾಲದು. ಅದಕ್ಕೆ ಪಾಲಕರು ಸಹ ಕೈ ಜೋಡಿಸಬೇಕು ಎಂದು ಹೇಳಿದರು.</p>.<p>ಸಾರ್ವಜನಿಕರು ಎಲ್ಲರೂ ಇದು ತಮ್ಮ ಕೆಲಸ ಎಂದು ಭಾವಿಸಿ ಬಾಲ ಕಾರ್ಮಿಕ ವ್ಯವಸ್ಥೆ ಸಮಾಜದಿಂದ ತೊಲಗುವಂತೆ ಮಾಡಬೇಕು. ಶಿಕ್ಷಣದಿಂದ ವಂಚಿತರಾಗಿ ಬೇರೆ ಬೇರೆ ಕೆಲಸಗಳಿಗೆ ತೊಡಗಿರುವ ಬಾಲಕಾರ್ಮಿಕರು ಕಂಡು ಬಂದರೆಲಿ ಪ್ರಕರಣವನ್ನು ದಾಖಲಿಸಬೇಕು ಎಂದರು.<br /><br /> ಜಯಶ್ರೀ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳ ದುಡಿಮೆ ದೂರ ಮಾಡಿ, ಕಡ್ಡಾಯ ಶಿಕ್ಷಣ ನೀಡಿ ಶಾಲೆಗೆ ಕಳುಹಿಸಬೇಕು. ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಜತೆಗೆ ಶಾಲೆಯಲ್ಲಿ ಒಳ್ಳೆಯ ವಾತಾವಾರಣ ಕಲ್ಪಿಸಿಕೊಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಪ್ರಾಂಶುಪಾಲ ಮುನಿಯಪ್ಪ ಟಿ. ಮಾತನಾಡಿ, ಪ್ರತಿ ಮಗು ಕೂಡ ಶಿಕ್ಷಣ ಪಡೆದು ಉತ್ತಮವಾಗಿ ಜೀವಿಸುವ ಹಕ್ಕು ಹೊಂದಿದೆ. ಬಾಲಕಾರ್ಮಿಕ ಪದ್ಧತಿ ನಿವಾರಣೆ ಆಗಬೇಕಾದರೆ ಎಲ್ಲ ಮಕ್ಕಳಿಗೆ ಶಿಕ್ಷಣ ಅವಶ್ಯ. ಮಕ್ಕಳು ಉನ್ನತವಾಗಿ ಬೆಳೆಯಲು ಶಿಕ್ಷಣ ಬೇಕು ಎಂದರು.</p>.<p>ಸಹಾಯಕ ಪ್ರಾಧ್ಯಾಪಕ ಗಣಪತಿ ಟಿ., ಭಾಗೀರಥಿ, ಆಕಾಂಕ್ಷ, ಪ್ರೊ. ಆರ್.ವಿ. ಗೌಡ, ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ಭೂರೆ, ರಮೇಶ ಹಂಗರಗಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ. ಇದನ್ನು ತಡೆಯಬೇಕಾದರೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ’ ಎಂದು ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ನರಸಪ್ಪ ತಿಳಿಸಿದರು.</p>.<p>ನಗರದ ಆರ್.ವಿ.ಬಿಡಪ ಕಾನೂನು ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಬುಧವಾರ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಮಕ್ಕಳ ಶಿಕ್ಷಣದ ಮಹತ್ವ ಕುರಿತು ಸಮಾಜದಲ್ಲಿ ಅರಿವು ಮೂಡಿಸಬೇಕಿದೆ. ಶಿಕ್ಷಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡರೆ ಸಾಲದು. ಅದಕ್ಕೆ ಪಾಲಕರು ಸಹ ಕೈ ಜೋಡಿಸಬೇಕು ಎಂದು ಹೇಳಿದರು.</p>.<p>ಸಾರ್ವಜನಿಕರು ಎಲ್ಲರೂ ಇದು ತಮ್ಮ ಕೆಲಸ ಎಂದು ಭಾವಿಸಿ ಬಾಲ ಕಾರ್ಮಿಕ ವ್ಯವಸ್ಥೆ ಸಮಾಜದಿಂದ ತೊಲಗುವಂತೆ ಮಾಡಬೇಕು. ಶಿಕ್ಷಣದಿಂದ ವಂಚಿತರಾಗಿ ಬೇರೆ ಬೇರೆ ಕೆಲಸಗಳಿಗೆ ತೊಡಗಿರುವ ಬಾಲಕಾರ್ಮಿಕರು ಕಂಡು ಬಂದರೆಲಿ ಪ್ರಕರಣವನ್ನು ದಾಖಲಿಸಬೇಕು ಎಂದರು.<br /><br /> ಜಯಶ್ರೀ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳ ದುಡಿಮೆ ದೂರ ಮಾಡಿ, ಕಡ್ಡಾಯ ಶಿಕ್ಷಣ ನೀಡಿ ಶಾಲೆಗೆ ಕಳುಹಿಸಬೇಕು. ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಜತೆಗೆ ಶಾಲೆಯಲ್ಲಿ ಒಳ್ಳೆಯ ವಾತಾವಾರಣ ಕಲ್ಪಿಸಿಕೊಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಪ್ರಾಂಶುಪಾಲ ಮುನಿಯಪ್ಪ ಟಿ. ಮಾತನಾಡಿ, ಪ್ರತಿ ಮಗು ಕೂಡ ಶಿಕ್ಷಣ ಪಡೆದು ಉತ್ತಮವಾಗಿ ಜೀವಿಸುವ ಹಕ್ಕು ಹೊಂದಿದೆ. ಬಾಲಕಾರ್ಮಿಕ ಪದ್ಧತಿ ನಿವಾರಣೆ ಆಗಬೇಕಾದರೆ ಎಲ್ಲ ಮಕ್ಕಳಿಗೆ ಶಿಕ್ಷಣ ಅವಶ್ಯ. ಮಕ್ಕಳು ಉನ್ನತವಾಗಿ ಬೆಳೆಯಲು ಶಿಕ್ಷಣ ಬೇಕು ಎಂದರು.</p>.<p>ಸಹಾಯಕ ಪ್ರಾಧ್ಯಾಪಕ ಗಣಪತಿ ಟಿ., ಭಾಗೀರಥಿ, ಆಕಾಂಕ್ಷ, ಪ್ರೊ. ಆರ್.ವಿ. ಗೌಡ, ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ಭೂರೆ, ರಮೇಶ ಹಂಗರಗಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>