<p>ಔರಾದ್: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಕೇಂದ್ರದ ವತಿಯಿಂದ ತಾಲ್ಲೂಕಿನ ತುಳಜಾಪುರ ಗ್ರಾಮದಲ್ಲಿ ನಿರ್ಮಿಸಲಾದ ಚಿಣ್ಣರ ಪ್ರಗತಿ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಲಾಯಿತು.</p>.<p>ಸಾಮಾಜಿಕ ಕಾರ್ಯಕರ್ತ ರಿಯಾಜ್ಪಾಶಾ ಕೊಳ್ಳೂರ್ ಮಾತನಾಡಿ,‘6 ರಿಂದ 12 ವರ್ಷದ ಮಕ್ಕಳಿಗೆ ಅಕ್ಷರ ಜ್ಞಾನದ ಜತೆಗೆ ನೈತಿಕ ಮೌಲ್ಯ ಕಲಿಸಿಕೊಡುವ ನಿಟ್ಟಿನಲ್ಲಿ ಈ ಪ್ರಗತಿ ಕೇಂದ್ರ ಕೆಲಸ ಮಾಡಲಿದೆ’ ಎಂದರು.</p>.<p>‘ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಕೇಂದ್ರದ ವತಿಯಿಂದ ತಾಲ್ಲೂಕಿನ 128 ಗ್ರಾಮಗಳಲ್ಲಿ ಪ್ರಗತಿ ಕೇಂದ್ರ ಆರಂಭಿಸಿದ್ದಾರೆ. ಅದೇ ಊರಿನ ಮಹಿಳಾ ಸಂಪನ್ಮೂಲ ಶಿಕ್ಷಕಿಯನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.</p>.<p>ಮಾನವ ಸಂಪನ್ಮೂಲ ಕೇಂದ್ರದ ಜಿಲ್ಲಾ ಸಂಚಾಲಕ ಪ್ರಶಾಂತ ಸಿಂಧೆ ಮಾತನಾಡಿದರು.</p>.<p>ತಾಲ್ಲೂಕು ಸಂಚಾಲಕ ಶಿವಕಾಂತ ರ್ಯಾಕಲೆ, ಗ್ರಾಮ ಪಂಚಾಯಿತಿ ಸದಸ್ಯೆ ಸುಧಾರಾಣಿ, ಪ್ರಗತಿ ಕೇಂದ್ರದ ಶಿಕ್ಷಕಿ ರಾಧಿಕಾ, ನಾಗರಾಜ ವಲ್ಲೆಪುರೆ, ವೈಜಿನಾಥ ವಲ್ಲೆಪುರೆ, ಚಂದ್ರಕಾಂತ ಬಿರಾದಾರ, ಕಾಶಿನಾಥ ವಲ್ಲೆಪುರೆ ಹಾಗೂ ಧನರಾಜ ವಲ್ಲೆಪುರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಕೇಂದ್ರದ ವತಿಯಿಂದ ತಾಲ್ಲೂಕಿನ ತುಳಜಾಪುರ ಗ್ರಾಮದಲ್ಲಿ ನಿರ್ಮಿಸಲಾದ ಚಿಣ್ಣರ ಪ್ರಗತಿ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಲಾಯಿತು.</p>.<p>ಸಾಮಾಜಿಕ ಕಾರ್ಯಕರ್ತ ರಿಯಾಜ್ಪಾಶಾ ಕೊಳ್ಳೂರ್ ಮಾತನಾಡಿ,‘6 ರಿಂದ 12 ವರ್ಷದ ಮಕ್ಕಳಿಗೆ ಅಕ್ಷರ ಜ್ಞಾನದ ಜತೆಗೆ ನೈತಿಕ ಮೌಲ್ಯ ಕಲಿಸಿಕೊಡುವ ನಿಟ್ಟಿನಲ್ಲಿ ಈ ಪ್ರಗತಿ ಕೇಂದ್ರ ಕೆಲಸ ಮಾಡಲಿದೆ’ ಎಂದರು.</p>.<p>‘ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಕೇಂದ್ರದ ವತಿಯಿಂದ ತಾಲ್ಲೂಕಿನ 128 ಗ್ರಾಮಗಳಲ್ಲಿ ಪ್ರಗತಿ ಕೇಂದ್ರ ಆರಂಭಿಸಿದ್ದಾರೆ. ಅದೇ ಊರಿನ ಮಹಿಳಾ ಸಂಪನ್ಮೂಲ ಶಿಕ್ಷಕಿಯನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.</p>.<p>ಮಾನವ ಸಂಪನ್ಮೂಲ ಕೇಂದ್ರದ ಜಿಲ್ಲಾ ಸಂಚಾಲಕ ಪ್ರಶಾಂತ ಸಿಂಧೆ ಮಾತನಾಡಿದರು.</p>.<p>ತಾಲ್ಲೂಕು ಸಂಚಾಲಕ ಶಿವಕಾಂತ ರ್ಯಾಕಲೆ, ಗ್ರಾಮ ಪಂಚಾಯಿತಿ ಸದಸ್ಯೆ ಸುಧಾರಾಣಿ, ಪ್ರಗತಿ ಕೇಂದ್ರದ ಶಿಕ್ಷಕಿ ರಾಧಿಕಾ, ನಾಗರಾಜ ವಲ್ಲೆಪುರೆ, ವೈಜಿನಾಥ ವಲ್ಲೆಪುರೆ, ಚಂದ್ರಕಾಂತ ಬಿರಾದಾರ, ಕಾಶಿನಾಥ ವಲ್ಲೆಪುರೆ ಹಾಗೂ ಧನರಾಜ ವಲ್ಲೆಪುರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>