<p><strong>ಹುಮನಾಬಾದ್</strong>: ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರ ಜತೆಗೆ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ ಹೇಳಿದರು.</p>.<p>ಪಟ್ಟಣದ ಕ್ಷೇತ್ರ ಸಂಪನ್ಮೂಲ ಕಚೇರಿ ಸಭಾಂಗಣದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಸೋಮವಾರ ನಡೆದ 2019-20ನೇ ಸಾಲಿನ ಇನ್ಸಪೈಯರ್ಡ್ ಅವಾರ್ಡ್ ಕಾರ್ಯಗಾರದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕರು ಶಾಲಾ ಹಂತದಿಂದ ಮಕ್ಕಳಿಗೆ ಪಠ್ಯದ ಜತೆಗೆ ವೈಜ್ಞಾನಿಕ ದ್ಯಷ್ಠಿಕೋನ ಮೂಡಿಸುವುದರಿಂದ ಮಕ್ಕಳು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ ಎಂದರು.</p>.<p>ಶಿಕ್ಷಕ, ಶಿಕ್ಷಕಿಯರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕಲೆ, ಸಾಹಿತ್ಯ, ಸಂಸ್ಕ್ರತಿಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.</p>.<p>ಡಯಟ್ ಕಾಲೇಜಿನ ಪ್ರಾಚಾರ್ಯ ಶಶಿಕಾಂತ ವರ್ತುಳೆ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಿವಕುಮಾರ ಪಾರಶೆಟ್ಟಿ, ಉಪನ್ಯಾಸಕ ದೇವೆಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ರಾಜ್ಯ ಸಂಪನ್ಮೂಲ ಅಧಿಕಾರಿ ಮಾರುತಿ ಸಾಗರ್, ರಾಜ್ಯ ಸಂಪನ್ಮೂಲ ವ್ಯಕ್ತಿ, ಖಲೀಲ್ ಅಹಮ್ಮದ್ ಬಿಆರ್ಪಿ ಶ್ರೀಮಂತ ಧನಶ್ರೀ, ಸಚಿನ ಇದ್ದರು. ಸಿಆರ್ಪಿ ಪ್ರಕಾಶ ಬಂಬೂಳಗಿ ನಿರೂಪಿಸಿದರು. ಮಲ್ಲಪ್ಪ ಜಿಗಜಿಣಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್</strong>: ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರ ಜತೆಗೆ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ ಹೇಳಿದರು.</p>.<p>ಪಟ್ಟಣದ ಕ್ಷೇತ್ರ ಸಂಪನ್ಮೂಲ ಕಚೇರಿ ಸಭಾಂಗಣದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಸೋಮವಾರ ನಡೆದ 2019-20ನೇ ಸಾಲಿನ ಇನ್ಸಪೈಯರ್ಡ್ ಅವಾರ್ಡ್ ಕಾರ್ಯಗಾರದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕರು ಶಾಲಾ ಹಂತದಿಂದ ಮಕ್ಕಳಿಗೆ ಪಠ್ಯದ ಜತೆಗೆ ವೈಜ್ಞಾನಿಕ ದ್ಯಷ್ಠಿಕೋನ ಮೂಡಿಸುವುದರಿಂದ ಮಕ್ಕಳು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ ಎಂದರು.</p>.<p>ಶಿಕ್ಷಕ, ಶಿಕ್ಷಕಿಯರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕಲೆ, ಸಾಹಿತ್ಯ, ಸಂಸ್ಕ್ರತಿಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.</p>.<p>ಡಯಟ್ ಕಾಲೇಜಿನ ಪ್ರಾಚಾರ್ಯ ಶಶಿಕಾಂತ ವರ್ತುಳೆ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಿವಕುಮಾರ ಪಾರಶೆಟ್ಟಿ, ಉಪನ್ಯಾಸಕ ದೇವೆಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ರಾಜ್ಯ ಸಂಪನ್ಮೂಲ ಅಧಿಕಾರಿ ಮಾರುತಿ ಸಾಗರ್, ರಾಜ್ಯ ಸಂಪನ್ಮೂಲ ವ್ಯಕ್ತಿ, ಖಲೀಲ್ ಅಹಮ್ಮದ್ ಬಿಆರ್ಪಿ ಶ್ರೀಮಂತ ಧನಶ್ರೀ, ಸಚಿನ ಇದ್ದರು. ಸಿಆರ್ಪಿ ಪ್ರಕಾಶ ಬಂಬೂಳಗಿ ನಿರೂಪಿಸಿದರು. ಮಲ್ಲಪ್ಪ ಜಿಗಜಿಣಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>