<p><strong>ಚಿಟಗುಪ್ಪ(ಹುಮನಾಬಾದ್):</strong> ತಾಲ್ಲೂಕಿನ ಬಸೀರಾಪುರ ಗ್ರಾಮದಿಂದ ಮೀನಕೇರಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, 8 ವರ್ಷಗಳಿಂದ ದುರಸ್ತಿಯಾಗಿಲ್ಲ. ರಸ್ತೆ ಹಾಕಲಾಗಿದ್ದ ಡಾಂಬರು ಕಿತ್ತುಹೋಗಿದ್ದು, ಗುಂಡಿಗಳು ತುಂಬಿಕೊಂಡಿವೆ. </p>.<p>ಬಸೀಲಾಪುರ ಗ್ರಾಮವು ಮೀನಕೇರಾ ಗ್ರಾ.ಪಂ ವ್ಯಾಪ್ತಿಯಲ್ಲಿದೆ. ಗ್ರಾಮಸ್ಥರು, ವೈಯಕ್ತಿಕ ಕೆಲಸಗಳಿಗೆ ಮೀನಕೇರಾ ಗ್ರಾಮಕ್ಕೆ ತೆರಳಬೇಕು. ರಸ್ತೆ ಹಾಳಾಗಿದ್ದು, ದದರಿಂದ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಎಲ್ಲೆಂದರಲ್ಲಿ ತಗ್ಗು, ದಿನ್ನೆಗಳು ನಿರ್ಮಾಣವಾಗಿವೆ.</p>.<p>ಸದ್ಯ ಮಳೆಗಾಲ ಆಗಿದ್ದರಿಂದ ರಸ್ತೆಯಲ್ಲಿ ವಾಹನಗಳು ಸಂಚರಿಸುವಾಗ ಮಳೆ ನೀರು ಗುಂಡಿಗಳಲ್ಲಿ ಸಂಗ್ರಹಗೊಂಡು ಬೈಕ್ ಸವಾರರಿಗೆ ಕಿರಿಕಿರಿ ಊಂಟಾಗುತ್ತಿದೆ. ಬಟ್ಟೆಗಳು ರಸ್ತೆಯ ಮಳೆ ನೀರಿನಿಂದಾಗಿ ಹಾಳಾಗುತ್ತಿವೆ. ಆರೋಗ್ಯಕ್ಕೂ ತೊಂದರೆ ಆಗುತ್ತಿದೆ ಎಂದು ಬೈಕ್ ಸವಾರರೊಬ್ಬರು ಬೇಸರ ವ್ಯಕ್ತಪಡಿಸಿದರು.</p>.<p>ಬಸಿಲಾಪುರ ಗ್ರಾಮದ ಬಹುತೇಕ ರೈತರ ಹೊಲಗದ್ದೆಗಳಿಗೆ ಹೋಗಲು ಈ ರಸ್ತೆಯನ್ನು ಅವಲಂಬಿಸಿರುವುದರಿಂದ ಪಶುಗಳು, ಎತ್ತಿನಗಾಡಿ ಹೆಚ್ಚು ಸಂಚರಿಸುವುದರಿಂದ ರಸ್ತೆ ಮಧ್ಯೆ ಆಳವಾದ ಗುಂಡಿಗಳು ಉಂಟಾಗಿವೆ. ರಾತ್ರಿ ಸಮಯ ವಾಹನ ಸವಾರರಿಗೆ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಸಂಬಂಧಪಟ್ಟವರು ತಕ್ಷಣ ರಸ್ತೆ ದುರಸ್ತಿ ಕೈಗೊಂಡು ಸಂಪೂರ್ಣವಾಗಿ ಡಾಂಬರೀಕರಣ ಮಾಡಿದರೆ, ಜನರಿಗೆ ಅನುಕೂಲ ಆಗುತ್ತದೆ. ಇಲ್ಲವಾದಲ್ಲಿ ರಸ್ತೆ ಮೇಲೆ ಎಲ್ಲೆಂದರಲ್ಲಿ ನೀರು ನಿಂತು, ಕೆಸರು ಊಂಟಾಗಿ ತುಂಬಾ ಕಷ್ಟವಾಗುತ್ತದೆ. ಮೇಲಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಬಸೀಲಾಪುರ, ಅಲ್ಲಿಪೂರ ತಾಂಡಾ ನಿವಾಸಿಗಳು ಆಗ್ರಹಿಸಿದ್ದಾರೆ.</p>.<p>ಬಸೀರಾಪುರ ಗ್ರಾಮದ ಬಹುತೇಕ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ. ಸಾರ್ವಜನಿಕ ಶೌಚಾಲಯವನ್ನೂ ನಿರ್ಮಾಣ ಮಾಡಿಲ್ಲ. ಇದರಿಂದಾಗಿ ಮಹಿಳೆಯರು ಬಯಲಿಗೆ ತೆರಳುವ ಅನಿವಾರ್ಯ ಎದುರಾಗಿದೆ. ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<div><blockquote>ಈಗಾಗಲೇ ರಸ್ತೆ ಪರೀಶೀಲನೆ ಮಾಡಲಾಗಿದ್ದು ರಸ್ತೆ ನಿರ್ಮಾಣದ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಶೀಘ್ರ ಕ್ರಮವಹಿಸಲಾಗುವುದು</blockquote><span class="attribution"> ಭಾನುಪ್ರಕಾಶ ಜಿ.ಪಂ ಉಪವಿಭಾಗ ಅಧಿಕಾರಿ</span></div>.<div><blockquote>ರಸ್ತೆ ಸಂಪೂರ್ಣ ಹಾಳಾಗಿದೆ. ನಿತ್ಯವೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಿಸಿದ ಅಧಿಕಾರಿಗಳು ರಸ್ತೆ ಅಭಿವೃದ್ಧಿ ಮಾಡಬೇಕು. </blockquote><span class="attribution">ಶ್ರೀಕಾಂತ ಪಾಟೀಲ ಬಸೀರಾಪುರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ(ಹುಮನಾಬಾದ್):</strong> ತಾಲ್ಲೂಕಿನ ಬಸೀರಾಪುರ ಗ್ರಾಮದಿಂದ ಮೀನಕೇರಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, 8 ವರ್ಷಗಳಿಂದ ದುರಸ್ತಿಯಾಗಿಲ್ಲ. ರಸ್ತೆ ಹಾಕಲಾಗಿದ್ದ ಡಾಂಬರು ಕಿತ್ತುಹೋಗಿದ್ದು, ಗುಂಡಿಗಳು ತುಂಬಿಕೊಂಡಿವೆ. </p>.<p>ಬಸೀಲಾಪುರ ಗ್ರಾಮವು ಮೀನಕೇರಾ ಗ್ರಾ.ಪಂ ವ್ಯಾಪ್ತಿಯಲ್ಲಿದೆ. ಗ್ರಾಮಸ್ಥರು, ವೈಯಕ್ತಿಕ ಕೆಲಸಗಳಿಗೆ ಮೀನಕೇರಾ ಗ್ರಾಮಕ್ಕೆ ತೆರಳಬೇಕು. ರಸ್ತೆ ಹಾಳಾಗಿದ್ದು, ದದರಿಂದ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಎಲ್ಲೆಂದರಲ್ಲಿ ತಗ್ಗು, ದಿನ್ನೆಗಳು ನಿರ್ಮಾಣವಾಗಿವೆ.</p>.<p>ಸದ್ಯ ಮಳೆಗಾಲ ಆಗಿದ್ದರಿಂದ ರಸ್ತೆಯಲ್ಲಿ ವಾಹನಗಳು ಸಂಚರಿಸುವಾಗ ಮಳೆ ನೀರು ಗುಂಡಿಗಳಲ್ಲಿ ಸಂಗ್ರಹಗೊಂಡು ಬೈಕ್ ಸವಾರರಿಗೆ ಕಿರಿಕಿರಿ ಊಂಟಾಗುತ್ತಿದೆ. ಬಟ್ಟೆಗಳು ರಸ್ತೆಯ ಮಳೆ ನೀರಿನಿಂದಾಗಿ ಹಾಳಾಗುತ್ತಿವೆ. ಆರೋಗ್ಯಕ್ಕೂ ತೊಂದರೆ ಆಗುತ್ತಿದೆ ಎಂದು ಬೈಕ್ ಸವಾರರೊಬ್ಬರು ಬೇಸರ ವ್ಯಕ್ತಪಡಿಸಿದರು.</p>.<p>ಬಸಿಲಾಪುರ ಗ್ರಾಮದ ಬಹುತೇಕ ರೈತರ ಹೊಲಗದ್ದೆಗಳಿಗೆ ಹೋಗಲು ಈ ರಸ್ತೆಯನ್ನು ಅವಲಂಬಿಸಿರುವುದರಿಂದ ಪಶುಗಳು, ಎತ್ತಿನಗಾಡಿ ಹೆಚ್ಚು ಸಂಚರಿಸುವುದರಿಂದ ರಸ್ತೆ ಮಧ್ಯೆ ಆಳವಾದ ಗುಂಡಿಗಳು ಉಂಟಾಗಿವೆ. ರಾತ್ರಿ ಸಮಯ ವಾಹನ ಸವಾರರಿಗೆ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಸಂಬಂಧಪಟ್ಟವರು ತಕ್ಷಣ ರಸ್ತೆ ದುರಸ್ತಿ ಕೈಗೊಂಡು ಸಂಪೂರ್ಣವಾಗಿ ಡಾಂಬರೀಕರಣ ಮಾಡಿದರೆ, ಜನರಿಗೆ ಅನುಕೂಲ ಆಗುತ್ತದೆ. ಇಲ್ಲವಾದಲ್ಲಿ ರಸ್ತೆ ಮೇಲೆ ಎಲ್ಲೆಂದರಲ್ಲಿ ನೀರು ನಿಂತು, ಕೆಸರು ಊಂಟಾಗಿ ತುಂಬಾ ಕಷ್ಟವಾಗುತ್ತದೆ. ಮೇಲಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಬಸೀಲಾಪುರ, ಅಲ್ಲಿಪೂರ ತಾಂಡಾ ನಿವಾಸಿಗಳು ಆಗ್ರಹಿಸಿದ್ದಾರೆ.</p>.<p>ಬಸೀರಾಪುರ ಗ್ರಾಮದ ಬಹುತೇಕ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ. ಸಾರ್ವಜನಿಕ ಶೌಚಾಲಯವನ್ನೂ ನಿರ್ಮಾಣ ಮಾಡಿಲ್ಲ. ಇದರಿಂದಾಗಿ ಮಹಿಳೆಯರು ಬಯಲಿಗೆ ತೆರಳುವ ಅನಿವಾರ್ಯ ಎದುರಾಗಿದೆ. ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<div><blockquote>ಈಗಾಗಲೇ ರಸ್ತೆ ಪರೀಶೀಲನೆ ಮಾಡಲಾಗಿದ್ದು ರಸ್ತೆ ನಿರ್ಮಾಣದ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಶೀಘ್ರ ಕ್ರಮವಹಿಸಲಾಗುವುದು</blockquote><span class="attribution"> ಭಾನುಪ್ರಕಾಶ ಜಿ.ಪಂ ಉಪವಿಭಾಗ ಅಧಿಕಾರಿ</span></div>.<div><blockquote>ರಸ್ತೆ ಸಂಪೂರ್ಣ ಹಾಳಾಗಿದೆ. ನಿತ್ಯವೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಿಸಿದ ಅಧಿಕಾರಿಗಳು ರಸ್ತೆ ಅಭಿವೃದ್ಧಿ ಮಾಡಬೇಕು. </blockquote><span class="attribution">ಶ್ರೀಕಾಂತ ಪಾಟೀಲ ಬಸೀರಾಪುರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>