ಚಿಟಗುಪ್ಪ: ‘ಪಟ್ಟಣದ ಎಲ್ಲ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ವೈದ್ಯಕೀಯ ಸಿಬ್ಬಂದಿ ಜೊತೆಗೆ ಎಲ್ಲರೂ ಸಹಕರಿಸಬೇಕು’ ಎಂದು ತಹಶೀಲ್ದಾರ್ ಜಿಯಾವುಲ್ಲ ಹೇಳಿದರು.
ಇಲ್ಲಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಲಸಿಕಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.
‘ಪಟ್ಟಣದ ನಾಗರಿಕರು ಬೇರೆಡೆಗೆ ಹೋಗುವುದನ್ನು ತಪ್ಪಿಸಲು ಹೆಚ್ಚುವರಿ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ಕೋವಿಡ್ ವಿರುದ್ಧ ಗೆಲುವು ಸಾಧಿಸಲು 45ರಿಂದ 60 ವರ್ಷದ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು’ ಎಂದರು.
ಪುರಸಭೆ ಉಪಾಧ್ಯಕ್ಷೆ ಸೌಭಾಗ್ಯವತಿ ಸ್ವಾಮಿ, ಸದಸ್ಯರು, ನೋಡಲ್ ಅಧಿಕಾರಿ ಡಾ.ಗೋವಿಂದರಾವ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ಕನಕ, ಪರಿಸರ ಎಂಜಿನಿಯರ್ ಪೂಜಾ ಇದ್ದರು.
ವೈದ್ಯಾಧಿಕಾರಿ ಡಾ.ಕಿರಣ ಪಾಟೀಲ ಸ್ವಾಗತಿಸಿದರು. ಅಶೋಕ ಚನ್ನಕೋಟೆ ನಿರೂಪಿಸಿದರು.