<p><strong>ಚಿಟಗುಪ್ಪ</strong>(ಹುಮನಾಬಾದ್): ಪಟ್ಟಣದ ರೇವಣಸಿದ್ಧೇಶ್ವರ ಮಂದಿರದ ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಗುರುವಾರದಿಂದ ಪುರಾಣ ಹಾಗೂ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡಿವೆ. ಫೆ.26ರಂದು ಕೇದಾರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ.</p>.<p>ಪ್ರತಿದಿನ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ವೇದಮೂರ್ತಿ ಮಡಿವಾಳಯ್ಯ ಶಾಸ್ತ್ರಿ ಜೆಟರಗಿ ಅವರಿಂದ ಮಹಾಸಾದ್ವಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಮಹಾಪುರಾಣ ಪ್ರವಚನ ನಡೆಯಲಿದೆ. ಪುರಾಣದ ಬಳಿಕ ನಿತ್ಯ ಮಹಾಪ್ರಸಾದ ವಿತರಣೆ ನಡೆಯಲಿದೆ.</p>.<p>26ರಂದು ಸಂಜೆ 4 ಗಂಟೆಗೆ ಕೇದಾರ ಜಗದ್ಗುರು ಭೀಮಾಶಂಕರ ಶಿವಾಚಾರ್ಯ ಭಗವತ್ಪಾದರರ ಅಡ್ಡಪಲ್ಲಕ್ಕಿ ಉತ್ಸವವು ಪಟ್ಟಣದ ಗಣೇಶ ಮಂದಿರದಿಂದ ರೇವಣಸಿದ್ಧೇಶ್ವರ ಮಂದಿರದವರಿಗೆ ಜರುಗಲಿದೆ. 27ರಂದು ಬೆಳಿಗ್ಗೆ 8 ಗಂಟೆಗೆ ಕೇದಾರ ಶ್ರೀಗಳ ಸಾನ್ನಿಧ್ಯದಲ್ಲಿ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ, ನಂತರ ಮಹಾಪ್ರಸಾದ ನಡೆಯಲಿದೆ. </p>.<p>28ರಂದು ರಾತ್ರಿ 8 ಗಂಟೆಗೆ ಜಗದ್ಗುರು ರೇವಣಸಿದ್ಧೇಶ್ವರರ ಪಲ್ಲಕ್ಕಿ ಉತ್ಸವ ಪಾದಗಟ್ಟಿವರೆಗೆ ಜರುಗಲಿದೆ. 1ರಂದು ಸಂಜೆ 4 ಗಂಟೆಗೆ ಪುರಾಣ ಮಂಗಲೋತ್ಸವ, ಸಮಾರಂಭ ಸಮಾರೋಪ, ಮತ್ತು ಸಂಜೆ 6 ಗಂಟೆಗೆ ರಥೋತ್ಸವ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ</strong>(ಹುಮನಾಬಾದ್): ಪಟ್ಟಣದ ರೇವಣಸಿದ್ಧೇಶ್ವರ ಮಂದಿರದ ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಗುರುವಾರದಿಂದ ಪುರಾಣ ಹಾಗೂ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡಿವೆ. ಫೆ.26ರಂದು ಕೇದಾರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ.</p>.<p>ಪ್ರತಿದಿನ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ವೇದಮೂರ್ತಿ ಮಡಿವಾಳಯ್ಯ ಶಾಸ್ತ್ರಿ ಜೆಟರಗಿ ಅವರಿಂದ ಮಹಾಸಾದ್ವಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಮಹಾಪುರಾಣ ಪ್ರವಚನ ನಡೆಯಲಿದೆ. ಪುರಾಣದ ಬಳಿಕ ನಿತ್ಯ ಮಹಾಪ್ರಸಾದ ವಿತರಣೆ ನಡೆಯಲಿದೆ.</p>.<p>26ರಂದು ಸಂಜೆ 4 ಗಂಟೆಗೆ ಕೇದಾರ ಜಗದ್ಗುರು ಭೀಮಾಶಂಕರ ಶಿವಾಚಾರ್ಯ ಭಗವತ್ಪಾದರರ ಅಡ್ಡಪಲ್ಲಕ್ಕಿ ಉತ್ಸವವು ಪಟ್ಟಣದ ಗಣೇಶ ಮಂದಿರದಿಂದ ರೇವಣಸಿದ್ಧೇಶ್ವರ ಮಂದಿರದವರಿಗೆ ಜರುಗಲಿದೆ. 27ರಂದು ಬೆಳಿಗ್ಗೆ 8 ಗಂಟೆಗೆ ಕೇದಾರ ಶ್ರೀಗಳ ಸಾನ್ನಿಧ್ಯದಲ್ಲಿ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ, ನಂತರ ಮಹಾಪ್ರಸಾದ ನಡೆಯಲಿದೆ. </p>.<p>28ರಂದು ರಾತ್ರಿ 8 ಗಂಟೆಗೆ ಜಗದ್ಗುರು ರೇವಣಸಿದ್ಧೇಶ್ವರರ ಪಲ್ಲಕ್ಕಿ ಉತ್ಸವ ಪಾದಗಟ್ಟಿವರೆಗೆ ಜರುಗಲಿದೆ. 1ರಂದು ಸಂಜೆ 4 ಗಂಟೆಗೆ ಪುರಾಣ ಮಂಗಲೋತ್ಸವ, ಸಮಾರಂಭ ಸಮಾರೋಪ, ಮತ್ತು ಸಂಜೆ 6 ಗಂಟೆಗೆ ರಥೋತ್ಸವ ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>