<p><strong>ಚಿಟಗುಪ್ಪ</strong> (ಹುಮನಾಬಾದ್): ಆನ್ಲೈನ್ ಮೂಲಕ ನಡೆಯುವ ಔಷಧ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ಚಿಟಗುಪ್ಪ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದಿಂದ ಬುಧವಾರ ಪ್ರತಿಭಟನೆ ಜರುಗಿತು.</p>.<p>ಇಲ್ಲಿನ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು. ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು.</p>.<p>‘ಕೋವಿಡ್ ಸಮಯದಲ್ಲಿ ಕೋರಿಯರ್ ಮೂಲಕ ಔಷಧ ಮಾರಾಟಕ್ಕಾಗಿ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈ ಅವಕಾಶವನ್ನೇ ಬಳಸಿಕೊಂಡು ದೊಡ್ಡ ಕಂಪನಿಗಳು ಸಹ ಔಷಧ ಮಾರುತ್ತಿವೆ. ನಿಗದಿಗಿಂತಲೂ ಹೆಚ್ಚಿನ ರಿಯಾಯಿತಿ ನೀಡಿ, ಗ್ರಾಹಕರ ದಿಕ್ಕು ತಪ್ಪಿಸುತ್ತಿವೆ. ಮಾರಾಟವನ್ನು ನಿಷೇಧಿಸಲು ಕೇಂದ್ರ ಸರ್ಕಾರ ಕಾಯ್ದೆಯನ್ನು ರೂಪಿಸಬೇಕು’ ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.</p>.<p>ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ ಐನಾಪುರ, ಸೈಯದ್ ರಾಶದ್ ಅಲಿ ಪಟೇಲ್, ರಾಜಪ್ಪ ಧುಮ್ಮನಸೂರ್, ವಿಜಯಕುಮಾರ ವಿಜಯಪುರೆ ನಿರ್ಣಾ, ರಾಮದಾಸ ಮಂಕಲ್, ಸಿರಮತ್ ಮಂಕಲ್ ಮಹಮ್ಮದ್ ಅಪರ್ ಪಾಷಾ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-33-959674824</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ</strong> (ಹುಮನಾಬಾದ್): ಆನ್ಲೈನ್ ಮೂಲಕ ನಡೆಯುವ ಔಷಧ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ಚಿಟಗುಪ್ಪ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದಿಂದ ಬುಧವಾರ ಪ್ರತಿಭಟನೆ ಜರುಗಿತು.</p>.<p>ಇಲ್ಲಿನ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು. ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು.</p>.<p>‘ಕೋವಿಡ್ ಸಮಯದಲ್ಲಿ ಕೋರಿಯರ್ ಮೂಲಕ ಔಷಧ ಮಾರಾಟಕ್ಕಾಗಿ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈ ಅವಕಾಶವನ್ನೇ ಬಳಸಿಕೊಂಡು ದೊಡ್ಡ ಕಂಪನಿಗಳು ಸಹ ಔಷಧ ಮಾರುತ್ತಿವೆ. ನಿಗದಿಗಿಂತಲೂ ಹೆಚ್ಚಿನ ರಿಯಾಯಿತಿ ನೀಡಿ, ಗ್ರಾಹಕರ ದಿಕ್ಕು ತಪ್ಪಿಸುತ್ತಿವೆ. ಮಾರಾಟವನ್ನು ನಿಷೇಧಿಸಲು ಕೇಂದ್ರ ಸರ್ಕಾರ ಕಾಯ್ದೆಯನ್ನು ರೂಪಿಸಬೇಕು’ ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.</p>.<p>ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ ಐನಾಪುರ, ಸೈಯದ್ ರಾಶದ್ ಅಲಿ ಪಟೇಲ್, ರಾಜಪ್ಪ ಧುಮ್ಮನಸೂರ್, ವಿಜಯಕುಮಾರ ವಿಜಯಪುರೆ ನಿರ್ಣಾ, ರಾಮದಾಸ ಮಂಕಲ್, ಸಿರಮತ್ ಮಂಕಲ್ ಮಹಮ್ಮದ್ ಅಪರ್ ಪಾಷಾ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-33-959674824</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>