ಕಾರ್ಯಕ್ರಮಕ್ಕೂ ಮೊದಲು ತಾ.ಪಂ ಅಧ್ಯಕ್ಷ ರಮೇಶ ಡಾಕುಳಗಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಿವಕುಮಾರ ಅವರಿಗೆ ‘ನೀವು ಏಕೆ ನನ್ನ ಕರೆ ಸ್ವೀಕರಿಸುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ. ‘ದಿನೇ ದಿನೇ ಕೋವಿಡ್ ಪ್ರಕರಣ ಹೆಚ್ಚಾಗುತ್ತಿವೆ. ಹಾಗಾಗಿ ಸಭೆಗಳಲ್ಲಿ ಕೆಲವು ಕರೆಗಳನ್ನು ಸ್ಪಂದಿಸಲು ಆಗುತ್ತಿಲ್ಲ. ಜನರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ತಮ್ಮ ಶಕ್ತಿ ಮೀರಿ ಕಾರ್ಯ ಮಾಡುತ್ತಿದ್ದಾರೆ’ ಎನ್ನುತ್ತಿದ್ದಂತೆ ಅಧ್ಯಕ್ಷರು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎನ್ನಲಾಗಿದೆ.