<p>ಭಾಲ್ಕಿ: ಕ್ರೀಡೆಗಳಿಂದ ಆರೋಗ್ಯ ಸುಧಾರಿಸುತ್ತದೆ. ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಸಾಧ್ಯ ಎಂದು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ರೋಹಿದಾಸ್ ರಾಠೋಡ್ ಹೇಳಿದರು.</p>.<p>ಪಟ್ಟಣದ ಹುಮನಾಬಾದ್ ರಸ್ತೆ ಹತ್ತಿರದ ನಿರ್ಮಲಾ ಕ್ರಿಯೇಟಿವ್ ಸ್ಟಡೀಸ್ ಕಾಲೇಜು ಆವರಣದಲ್ಲಿ ನಡೆದ ಪ್ರಸ್ತುತ ಸಾಲಿನ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಬರೀ ಓದಿಗಷ್ಟೇ ಸೀಮಿತವಾಗದೇ, ಕ್ರೀಡೆಗಳಲ್ಲಿಯೂ ಭಾಗವಹಿಸಿ. ಉತ್ತಮ ಆರೋಗ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಶೈಕ್ಷಣಿಕ ಅವಧಿಗಳಲ್ಲಿ ಕ್ರೀಡೆಗೂ ಸಮಯ ನೀಡಲಾಗಿದೆ ಎಂದು ಹೇಳಿದರು.</p>.<p>ಕನ್ನಡ ಭಾಗ್ಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಾಹುಲ್ ಗಾಯಕವಾಡ ಕಾರ್ಯಕ್ರಮ ಉದ್ಘಾಟಿಸಿದರು. ರಾಜೀವ್ಗಾಂಧಿ ಸ್ಮಾರಕ ಪ್ರೌಢಶಾಲೆಯ ಮುಖ್ಯಶಿಕ್ಷಕ ಅನಿಲ್ ಕುಮಾರ್ ಗಾಯಕವಾಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಶಿಕ್ಷಣ ಸಂಯೋಜಕ ಸಹದೇವ.ಜಿ, ಶಾರದಾ ಪಬ್ಲಿಕ್ ಶಾಲೆಯ ಅಧ್ಯಕ್ಷ ವಸಂತ ಪಾಟೀಲ, ಸಿಆರ್ಪಿ ಅಂಬ್ರೀಶ ಖಂಡ್ರೆ, ದೈಹಿಕ ಶಿಕ್ಷಕ ಚನ್ನವೀರ ಚಕ್ರಸಾಲಿ, ಮೈತ್ರಾದೇವಿ ಚಂದ್ರಕಾಂತ ಬಿರಾದಾರ, ಪ್ರಾಚಾರ್ಯ ಜಾಲಿಂದರ ಜಗನ್ನಾಥ ಮೇತ್ರೆ, ವಿಠಲರಾವ್ ಬಿರಾದಾರ, ಪ್ರತಾಪ ಕೋಣೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ಕ್ರೀಡೆಗಳಿಂದ ಆರೋಗ್ಯ ಸುಧಾರಿಸುತ್ತದೆ. ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಸಾಧ್ಯ ಎಂದು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ರೋಹಿದಾಸ್ ರಾಠೋಡ್ ಹೇಳಿದರು.</p>.<p>ಪಟ್ಟಣದ ಹುಮನಾಬಾದ್ ರಸ್ತೆ ಹತ್ತಿರದ ನಿರ್ಮಲಾ ಕ್ರಿಯೇಟಿವ್ ಸ್ಟಡೀಸ್ ಕಾಲೇಜು ಆವರಣದಲ್ಲಿ ನಡೆದ ಪ್ರಸ್ತುತ ಸಾಲಿನ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಬರೀ ಓದಿಗಷ್ಟೇ ಸೀಮಿತವಾಗದೇ, ಕ್ರೀಡೆಗಳಲ್ಲಿಯೂ ಭಾಗವಹಿಸಿ. ಉತ್ತಮ ಆರೋಗ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಶೈಕ್ಷಣಿಕ ಅವಧಿಗಳಲ್ಲಿ ಕ್ರೀಡೆಗೂ ಸಮಯ ನೀಡಲಾಗಿದೆ ಎಂದು ಹೇಳಿದರು.</p>.<p>ಕನ್ನಡ ಭಾಗ್ಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಾಹುಲ್ ಗಾಯಕವಾಡ ಕಾರ್ಯಕ್ರಮ ಉದ್ಘಾಟಿಸಿದರು. ರಾಜೀವ್ಗಾಂಧಿ ಸ್ಮಾರಕ ಪ್ರೌಢಶಾಲೆಯ ಮುಖ್ಯಶಿಕ್ಷಕ ಅನಿಲ್ ಕುಮಾರ್ ಗಾಯಕವಾಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಶಿಕ್ಷಣ ಸಂಯೋಜಕ ಸಹದೇವ.ಜಿ, ಶಾರದಾ ಪಬ್ಲಿಕ್ ಶಾಲೆಯ ಅಧ್ಯಕ್ಷ ವಸಂತ ಪಾಟೀಲ, ಸಿಆರ್ಪಿ ಅಂಬ್ರೀಶ ಖಂಡ್ರೆ, ದೈಹಿಕ ಶಿಕ್ಷಕ ಚನ್ನವೀರ ಚಕ್ರಸಾಲಿ, ಮೈತ್ರಾದೇವಿ ಚಂದ್ರಕಾಂತ ಬಿರಾದಾರ, ಪ್ರಾಚಾರ್ಯ ಜಾಲಿಂದರ ಜಗನ್ನಾಥ ಮೇತ್ರೆ, ವಿಠಲರಾವ್ ಬಿರಾದಾರ, ಪ್ರತಾಪ ಕೋಣೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>