<p><strong>ಬೀದರ್: </strong>ಗಾಂಧಿ ಜಯಂತಿ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆಯ ಅಧೀನದ ನೌಬಾದ್ನ ಮೆಟ್ರಿಕ್ ನಂತರದ ಬಾಲಕಿಯರ ವಸತಿ (ಹೊಸ) ನಿಲಯದ ವಿದ್ಯಾರ್ಥಿನಿಯರು ಸ್ವಚ್ಛತಾ ಶ್ರಮದಾನ ಮಾಡಿದರು.</p>.<p>ಕೈಯಲ್ಲಿ ಪೊರಕೆ ಹಿಡಿದು ಕಟ್ಟಡದ ಒಳಗಿನ ಹಾಗೂ ಹೊರಗಿನ ಆವರಣ ಶುಚಿಗೊಳಿಸಿದರು. ಕಸ, ಕಡ್ಡಿಗಳನ್ನು ಆಯ್ದು ಸ್ಥಳಾಂತರ ಮಾಡಿದರು.</p>.<p>ವಿದ್ಯಾರ್ಥಿಗಳು ಮಹಾತ್ಮ ಗಾಂಧಿ ಅವರ ಸತ್ಯ, ಅಹಿಂಸಾ ತತ್ವಗಳನ್ನು ಪಾಲಿಸಬೇಕು ಎಂದು ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಹೇಳಿದರು.</p>.<p>ಗಾಂಧಿ ಅವರ ಕನಸಿನ ಸ್ವಚ್ಛ, ಸ್ವಸ್ಥ ಹಾಗೂ ಸುಂದರ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.</p>.<p>ಕಚೇರಿ ವ್ಯವಸ್ಥಾಪಕ ರಮೇಶ ಗೋಖಲೆ, ವಾರ್ಡನ್ ಶೀಲಾ ವಾಡೇಕರ್, ವಿದ್ಯಾರ್ಥಿನಿಯರಾದ ಉಷಾ, ಶಿವರಾಜ, ಜಗದೇವಿ ಶರಣಪ್ಪ, ಕಾವೇರಿ ಭೀಮರಾವ್, ಆರತಿ ಬಾಬುರಾವ್, ವಿಜಯಲಕ್ಷ್ಮಿ, ದಯಾನಂದ, ಉಷಾ ಗಾಂಧಿ, ಸುಮಾ ಪಾಂಡುರಂಗ ಇದ್ದರು.</p>.<p><strong>ಗಾಂಧಿ ಜಯಂತಿ ಆಚರಣೆ</strong>: ನಗರದ ಪ್ರತಾಪನಗರದ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು.</p>.<p>ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಅವರು ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ವ್ಯವಸ್ಥಾಪಕ ರಮೇಶ ಗೋಖಲೆ, ಪ್ರಥಮ ದರ್ಜೆ ಸಹಾಯಕಿ ಮಹಾದೇವಿ, ದ್ವಿತೀಯ ದರ್ಜೆ ಸಹಾಯಕ ರತನಸಿಂಗ್, ಬೆರಳಚ್ಚುಗಾರ್ತಿ ಅನಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಗಾಂಧಿ ಜಯಂತಿ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆಯ ಅಧೀನದ ನೌಬಾದ್ನ ಮೆಟ್ರಿಕ್ ನಂತರದ ಬಾಲಕಿಯರ ವಸತಿ (ಹೊಸ) ನಿಲಯದ ವಿದ್ಯಾರ್ಥಿನಿಯರು ಸ್ವಚ್ಛತಾ ಶ್ರಮದಾನ ಮಾಡಿದರು.</p>.<p>ಕೈಯಲ್ಲಿ ಪೊರಕೆ ಹಿಡಿದು ಕಟ್ಟಡದ ಒಳಗಿನ ಹಾಗೂ ಹೊರಗಿನ ಆವರಣ ಶುಚಿಗೊಳಿಸಿದರು. ಕಸ, ಕಡ್ಡಿಗಳನ್ನು ಆಯ್ದು ಸ್ಥಳಾಂತರ ಮಾಡಿದರು.</p>.<p>ವಿದ್ಯಾರ್ಥಿಗಳು ಮಹಾತ್ಮ ಗಾಂಧಿ ಅವರ ಸತ್ಯ, ಅಹಿಂಸಾ ತತ್ವಗಳನ್ನು ಪಾಲಿಸಬೇಕು ಎಂದು ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಹೇಳಿದರು.</p>.<p>ಗಾಂಧಿ ಅವರ ಕನಸಿನ ಸ್ವಚ್ಛ, ಸ್ವಸ್ಥ ಹಾಗೂ ಸುಂದರ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.</p>.<p>ಕಚೇರಿ ವ್ಯವಸ್ಥಾಪಕ ರಮೇಶ ಗೋಖಲೆ, ವಾರ್ಡನ್ ಶೀಲಾ ವಾಡೇಕರ್, ವಿದ್ಯಾರ್ಥಿನಿಯರಾದ ಉಷಾ, ಶಿವರಾಜ, ಜಗದೇವಿ ಶರಣಪ್ಪ, ಕಾವೇರಿ ಭೀಮರಾವ್, ಆರತಿ ಬಾಬುರಾವ್, ವಿಜಯಲಕ್ಷ್ಮಿ, ದಯಾನಂದ, ಉಷಾ ಗಾಂಧಿ, ಸುಮಾ ಪಾಂಡುರಂಗ ಇದ್ದರು.</p>.<p><strong>ಗಾಂಧಿ ಜಯಂತಿ ಆಚರಣೆ</strong>: ನಗರದ ಪ್ರತಾಪನಗರದ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು.</p>.<p>ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಅವರು ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ವ್ಯವಸ್ಥಾಪಕ ರಮೇಶ ಗೋಖಲೆ, ಪ್ರಥಮ ದರ್ಜೆ ಸಹಾಯಕಿ ಮಹಾದೇವಿ, ದ್ವಿತೀಯ ದರ್ಜೆ ಸಹಾಯಕ ರತನಸಿಂಗ್, ಬೆರಳಚ್ಚುಗಾರ್ತಿ ಅನಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>