ಬೀದರ್: ಉತ್ತಮ ಆರೋಗ್ಯಕ್ಕೆ ಸುತ್ತಮುತ್ತಲಿನ ಪರಿಸರ ಶುಚಿಯಾಗಿ ಇಟ್ಟುಕೊಳ್ಳುವುದು ಅಗತ್ಯವಾಗಿದೆ ಎಂದು ರೈಸಿಂಗ್ ಹ್ಯಾಂಡ್ಸ್ ಯುತ್ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಸತೀಶ ಬೆಳಕೋಟೆ ಹೇಳಿದರು.
ಇಲ್ಲಿಯ ಶರಣ ಉದ್ಯಾನ ಸಮೀಪದ ಸಪ್ತಗಿರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆದ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶುಚಿತ್ವಕ್ಕೆ ಒತ್ತು ನೀಡಿದ್ದಲ್ಲಿ ಕೋವಿಡ್ನಿಂದ ಬೇಗ ಪಾರಾಗಬಹುದು ಎಂದು ತಿಳಿಸಿದರು.