<p><strong>ಬೀದರ್:</strong> ಸಾರ್ವಜನಿಕ ರಸ್ತೆ, ಉದ್ಯಾನ ಹಾಗೂ ಇತರ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಕಟ್ಟಡಗಳ ಗುರುತಿಸುವಿಕೆ, ತೆರವು ಹಾಗೂ ಸ್ಥಳಾಂತರ ಕಾರ್ಯವನ್ನು ತ್ವರಿತಗತಿಯಲ್ಲಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.</p>.<p>ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.</p>.<p>ರಸ್ತೆಗಳು, ಸಾರ್ವಜನಿಕ ಸ್ವತ್ತು, ಜನ ನಿತ್ಯ ಓಡಾಡುವ ರಸ್ತೆಗಳಲ್ಲಿ ಅನುಮತಿ ಪಡೆಯದ ಧಾರ್ಮಿಕ ಕಟ್ಟಡಗಳು ಇರಕೂಡದು ಎನ್ನುವ ನಿಯಮ ಪಾಲನೆ ಮಾಡಬೇಕಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಅನಧಿಕೃತವಾಗಿ ಧಾರ್ಮಿಕ ಕಟ್ಟಡ, ಪ್ರತಿಮೆಗಳನ್ನು ನಿರ್ಮಿಸಿದ್ದರೆ ಅವನ್ನು ತೆರವುಗೊಳಿಸಲು ಮೊದಲು ನೋಟಿಸ್ ನೀಡಬೇಕು. ಆದರೂ ಸಂಬಂಧಿಸಿದವರು ತೆರವಿಗೆ ಮುಂದಾಗದಿದ್ದಲ್ಲಿ ಎರಡನೇ ನೋಟಿಸ್ ಕೊಟ್ಟು, ಅನಂತರ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಸೂಚಿಸಿದರು.</p>.<p>ಗ್ರಾಮೀಣ ಭಾಗದಲ್ಲಿಯೂ ಈ ಕಾರ್ಯಾಚರಣೆ ನಡೆಯಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಂದಾಯ ನಿರೀಕ್ಷಕ, ಇತರ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ರಚಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.</p>.<p>ಧಾರ್ಮಿಕ ಕಟ್ಟಡ ಮತ್ತು ಪ್ರತಿಮೆಗಳ ತೆರವು ಕಾರ್ಯಾಚರಣೆ ಅತ್ಯಂತ ಸೂಕ್ಷ್ಮ ವಿಷಯವಾಗಿದೆ. ಹೀಗಾಗಿ ಈ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು. ಧಾರ್ಮಿಕ ಕಟ್ಟಡ ಮತ್ತು ಪ್ರತಿಮೆಗಳು ರಸ್ತೆಗಳಲ್ಲಿ ಇರಬಾರದು ಎನ್ನುವುದು ನಮ್ಮ ಉದ್ದೇಶವಲ್ಲ. ಆದರೆ, ಜನ ಸಂಚಾರಕ್ಕೆ ತೊಂದರೆ ಉಂಟು ಮಾಡುವ ಮತ್ತು ಅನಧಿಕೃತವಾಗಿ ನಿರ್ಮಿಸಿದ ಕಾರಣಕ್ಕೆ ತೆರವು ಮಾಡಲಾಗುತ್ತಿದೆ ಎನ್ನುವುದನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.</p>.<p>ಯಾವುದೇ ರಸ್ತೆಯಲ್ಲಿ ಧಾರ್ಮಿಕ ಕಟ್ಟಡಗಳು ಯೋಗ್ಯ ರೀತಿಯಲ್ಲಿ ನಿರ್ಮಾಣವಾಗಿದ್ದರೆ, ರಸ್ತೆಯ ಸಂಚಾರಕ್ಕೆ ಆಡಚಣೆ ಇಲ್ಲದಿದ್ದರೆ ಅಂತಹವುಗಳನ್ನು ಅಧಿಕೃತಗೊಳಿಸಲು ಕೂಡ ಅವಕಾಶ ಇದೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಉಪ ವಿಭಾಗಾಧಿಕಾರಿಗಳಾದ ಗರಿಮಾ ಪನ್ವಾರ್, ಭುವನೇಶ ಪಾಟೀಲ, ತಹಶೀಲ್ದಾರ್ ಗಂಗಾದೇವಿ ಸಿ.ಎಚ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಪುತೋಡೋ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಸಾರ್ವಜನಿಕ ರಸ್ತೆ, ಉದ್ಯಾನ ಹಾಗೂ ಇತರ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಕಟ್ಟಡಗಳ ಗುರುತಿಸುವಿಕೆ, ತೆರವು ಹಾಗೂ ಸ್ಥಳಾಂತರ ಕಾರ್ಯವನ್ನು ತ್ವರಿತಗತಿಯಲ್ಲಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.</p>.<p>ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.</p>.<p>ರಸ್ತೆಗಳು, ಸಾರ್ವಜನಿಕ ಸ್ವತ್ತು, ಜನ ನಿತ್ಯ ಓಡಾಡುವ ರಸ್ತೆಗಳಲ್ಲಿ ಅನುಮತಿ ಪಡೆಯದ ಧಾರ್ಮಿಕ ಕಟ್ಟಡಗಳು ಇರಕೂಡದು ಎನ್ನುವ ನಿಯಮ ಪಾಲನೆ ಮಾಡಬೇಕಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಅನಧಿಕೃತವಾಗಿ ಧಾರ್ಮಿಕ ಕಟ್ಟಡ, ಪ್ರತಿಮೆಗಳನ್ನು ನಿರ್ಮಿಸಿದ್ದರೆ ಅವನ್ನು ತೆರವುಗೊಳಿಸಲು ಮೊದಲು ನೋಟಿಸ್ ನೀಡಬೇಕು. ಆದರೂ ಸಂಬಂಧಿಸಿದವರು ತೆರವಿಗೆ ಮುಂದಾಗದಿದ್ದಲ್ಲಿ ಎರಡನೇ ನೋಟಿಸ್ ಕೊಟ್ಟು, ಅನಂತರ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಸೂಚಿಸಿದರು.</p>.<p>ಗ್ರಾಮೀಣ ಭಾಗದಲ್ಲಿಯೂ ಈ ಕಾರ್ಯಾಚರಣೆ ನಡೆಯಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಂದಾಯ ನಿರೀಕ್ಷಕ, ಇತರ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ರಚಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.</p>.<p>ಧಾರ್ಮಿಕ ಕಟ್ಟಡ ಮತ್ತು ಪ್ರತಿಮೆಗಳ ತೆರವು ಕಾರ್ಯಾಚರಣೆ ಅತ್ಯಂತ ಸೂಕ್ಷ್ಮ ವಿಷಯವಾಗಿದೆ. ಹೀಗಾಗಿ ಈ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು. ಧಾರ್ಮಿಕ ಕಟ್ಟಡ ಮತ್ತು ಪ್ರತಿಮೆಗಳು ರಸ್ತೆಗಳಲ್ಲಿ ಇರಬಾರದು ಎನ್ನುವುದು ನಮ್ಮ ಉದ್ದೇಶವಲ್ಲ. ಆದರೆ, ಜನ ಸಂಚಾರಕ್ಕೆ ತೊಂದರೆ ಉಂಟು ಮಾಡುವ ಮತ್ತು ಅನಧಿಕೃತವಾಗಿ ನಿರ್ಮಿಸಿದ ಕಾರಣಕ್ಕೆ ತೆರವು ಮಾಡಲಾಗುತ್ತಿದೆ ಎನ್ನುವುದನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.</p>.<p>ಯಾವುದೇ ರಸ್ತೆಯಲ್ಲಿ ಧಾರ್ಮಿಕ ಕಟ್ಟಡಗಳು ಯೋಗ್ಯ ರೀತಿಯಲ್ಲಿ ನಿರ್ಮಾಣವಾಗಿದ್ದರೆ, ರಸ್ತೆಯ ಸಂಚಾರಕ್ಕೆ ಆಡಚಣೆ ಇಲ್ಲದಿದ್ದರೆ ಅಂತಹವುಗಳನ್ನು ಅಧಿಕೃತಗೊಳಿಸಲು ಕೂಡ ಅವಕಾಶ ಇದೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಉಪ ವಿಭಾಗಾಧಿಕಾರಿಗಳಾದ ಗರಿಮಾ ಪನ್ವಾರ್, ಭುವನೇಶ ಪಾಟೀಲ, ತಹಶೀಲ್ದಾರ್ ಗಂಗಾದೇವಿ ಸಿ.ಎಚ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಪುತೋಡೋ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>