ಕಾಂಗ್ರೆಸ್ ಅಭ್ಯರ್ಥಿ ಬೈರತಿ ಬಸವರಾಜು, ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ, ಜೆಡಿಎಸ್ ಅಭ್ಯರ್ಥಿ ಹನುಮಂತೇಗೌಡ ಈ ಮೂವರೂ ಮತಗಟ್ಟೆ ಬಳಿ ಬಂದಿದ್ದಾರೆ. ಈ ವೇಳೆ ಕಾಂಗ್ರೆಸ್ನ ಬೈರತಿ ಬಸವರಾಜು ಅವರು ಅಪಾರ್ಟ್ಮೆಂಟ್ವೊಂದರ ಒಳಗೆ ಹೋಗಿದ್ದಾರೆ. ಇದನ್ನು ಕಂಡ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು, ಬೈರತಿ ಬಸವರಾಜು ಹಣ ಹಂಚಲು ಒಳಗೆ ಹೋಗಿದ್ದಾರೆ ಎಂದು ಆರೋಪಿಸಿ ಆಪಾರ್ಟ್ಮೆಂಟ್ ಮುಂದೆ ಪ್ರತಿಭಟನೆ ಆರಂಭಿಸಿದರು.