ಬೀದರ್: ‘ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಿಕಾ ಭವನಕ್ಕೆ ಭೇಟಿ ಕೊಡುವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳಿಗೆ ಅವರು ಈ ಭರವಸೆ ನೀಡಿದರು.
ಬೀದರ್ ಜಿಲ್ಲೆಯವರೇ ಆದ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಬೀದರ್ನ ನೂತನ ಪತ್ರಿಕಾ ಭವನದ ಉದ್ಘಾಟನೆ ನೆರವೇರಿಸಿ ಎಂದು ಸಲಹೆ ನೀಡಿದರು.
ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕಮಾರ ಕರಂಜಿ, ಜಿಲ್ಲೆಯ ಪತ್ರಕರ್ತರು ಇದ್ದರು.