ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಧವಾರ ಬೀದರ್‌ಗೆ ಮುಖ್ಯಮಂತ್ರಿ ಯಡಿಯೂರಪ್ಪ

Last Updated 4 ಜನವರಿ 2021, 15:37 IST
ಅಕ್ಷರ ಗಾತ್ರ

ಬೀದರ್‌: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನವರಿ 6ರಂದು ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬುಧವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.15ಕ್ಕೆ ಬೀದರ್ ವಾಯುಪಡೆ ವಿಮಾನ ನಿಲ್ದಾಣಕ್ಕೆ ಬರುವರು. ಬೆಳಿಗ್ಗೆ 10.30ಕ್ಕೆ ಬೀದರ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 100 ಹಾಸಿಗೆಗಳ ತಾಯಿ ಮತ್ತು ಮಗು ಆಸ್ಪತ್ರೆ ಉದ್ಘಾಟಿಸುವರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು.

ನಂತರ ಹ್ಯಾಲಿಕಾಪ್ಟರ್‌ ಮೂಲಕ ಬೆಳಿಗ್ಗೆ 11.50ಕ್ಕೆ ಬಸವಕಲ್ಯಾಣಕ್ಕೆ ತೆರಳುವರು. ಮಧ್ಯಾಹ್ನ 12 ಗಂಟೆಗೆ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಭೂಮಿಪೂಜೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 2 ಗಂಟೆಗೆ ಬಸವಕಲ್ಯಾಣದಿಂದ ಹ್ಯಾಲಿಕಾಪ್ಟರ್‌ ಮೂಲಕ ಯಾದಗಿರಿ ಜಿಲ್ಲೆಗೆ ಪ್ರಯಾಣ ಬೆಳೆಸುವರು. ಸಂಜೆ 5 ಗಂಟೆಗೆ ಯಾದಗಿರಿಯಿಂದ ಹ್ಯಾಲಿಕಾಪ್ಟರ್‌ನಲ್ಲಿ ಬೀದರ್‌ಗೆ ಬಂದು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT