‘ಬುಧವಾರ ಸಾಮಾನ್ಯ ಸಭೆ ನಿಗದಿಪಡಿಸಲಾಗಿತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಇರುವುದರಿಂದ ಸಭೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ನೋಟಿಸ್ ಕೊಡದೆ ಈ ರೀತಿ ಏಕಾಏಕಿ ಮುಂದೂಡಿರುವುದು ಸರಿಯಲ್ಲ. ನಾವು ಜನರ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆಗೆ ಬರುತ್ತೇವೆ. ಆದರೆ, ಯಾವುದೋ ನೆಪವೊಡ್ಡಿ ಸಭೆ ಮುಂದೂಡಿರುವುದು ಸರಿಯಲ್ಲ’ ಎಂದು ಸದಸ್ಯರು ಆಕ್ಷೇಪಿಸಿದರು.