<p><strong>ಬೀದರ್</strong>: ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದವರು ಇಲ್ಲಿನ ನಗರಸಭೆ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮಂಗಳವಾರ ಭೇಟಿ ನೀಡಿದರು.</p>.<p>ಪೌರ ಕಾರ್ಮಿಕರ ಅಹವಾಲು ಸ್ವೀಕರಿಸಿದ ಅವರು, ಸ್ಥಳದಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ, ಮಾತನಾಡಿದರು. ಆದಷ್ಟು ಶೀಘ್ರ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.</p>.<p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಪೌರ ಕಾರ್ಮಿಕರು ಅನೇಕ ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕೆಲಸ ನಿರ್ವಹಿಸುತ್ತಿದ್ದು, ಅವರ ಕೆಲಸ ಕಾಯಂಗೊಳಿಸಬೇಕು. ಪ್ರತಿ ತಿಂಗಳ ವೇತನವನ್ನು ಅವರ ಖಾತೆಗೆ ಜಮೆ ಮಾಡಬೇಕೆಂದು ಎರಡು ಪ್ರಮುಖವಾದ ಬೇಡಿಕೆಗಳನ್ನು ಇಟ್ಟಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಚರ್ಚಿಸಿದ್ದೇನೆ. ಶೀಘ್ರದಲ್ಲಿ ಈ ಸಂಬಂಧ ಸಭೆ ನಡೆಸಿ, ಅವರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಈ ವಿಷಯ ನನ್ನ ಖಾತೆಯ ಜೊತೆಗೆ ನಗರಾಭಿವೃದ್ಧಿ ಖಾತೆಗೂ ಬರುತ್ತದೆ. ಈ ಬಗ್ಗೆ ಸಂಬಂಧಿಸಿದ ಎಲ್ಲ ಸಚಿವರು ಸಿಎಂ ಜೊತೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.</p>.<p>ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದವರು ಇಲ್ಲಿನ ನಗರಸಭೆ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮಂಗಳವಾರ ಭೇಟಿ ನೀಡಿದರು.</p>.<p>ಪೌರ ಕಾರ್ಮಿಕರ ಅಹವಾಲು ಸ್ವೀಕರಿಸಿದ ಅವರು, ಸ್ಥಳದಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ, ಮಾತನಾಡಿದರು. ಆದಷ್ಟು ಶೀಘ್ರ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.</p>.<p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಪೌರ ಕಾರ್ಮಿಕರು ಅನೇಕ ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕೆಲಸ ನಿರ್ವಹಿಸುತ್ತಿದ್ದು, ಅವರ ಕೆಲಸ ಕಾಯಂಗೊಳಿಸಬೇಕು. ಪ್ರತಿ ತಿಂಗಳ ವೇತನವನ್ನು ಅವರ ಖಾತೆಗೆ ಜಮೆ ಮಾಡಬೇಕೆಂದು ಎರಡು ಪ್ರಮುಖವಾದ ಬೇಡಿಕೆಗಳನ್ನು ಇಟ್ಟಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಚರ್ಚಿಸಿದ್ದೇನೆ. ಶೀಘ್ರದಲ್ಲಿ ಈ ಸಂಬಂಧ ಸಭೆ ನಡೆಸಿ, ಅವರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಈ ವಿಷಯ ನನ್ನ ಖಾತೆಯ ಜೊತೆಗೆ ನಗರಾಭಿವೃದ್ಧಿ ಖಾತೆಗೂ ಬರುತ್ತದೆ. ಈ ಬಗ್ಗೆ ಸಂಬಂಧಿಸಿದ ಎಲ್ಲ ಸಚಿವರು ಸಿಎಂ ಜೊತೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.</p>.<p>ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>