<p><strong>ಬೀದರ್:</strong> ನಗರದಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಕೋಚಿಂಗ್ ಕೇಂದ್ರ ಹಾಗೂ ಖಾಸಗಿ ಕಾಲೇಜುಗಳು ಅಧಿಕ ಶುಲ್ಕ ಪಡೆಯುತ್ತಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಿತು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಅವರಿಗೆ ಸಲ್ಲಿಸಿದರು.</p>.<p>ನಂತರ ಸಂಘದ ಪ್ರಮುಖರು ಮಾತನಾಡಿ, ನಗರದ ಚಿದ್ರಿ ರಸ್ತೆಯಲ್ಲಿ ಇರುವ ಹನುಮಾನ ನಗರದಲ್ಲಿನ ಫಿಜಿಕ್ಸ್ ವಾಲಾ ವಿದ್ಯಾಪೀಠ ಪಾಠಶಾಲಾ ಕೋಚಿಂಗ್ ಸೆಂಟರ್ ಅನಧಿಕೃತವಾಗಿ ನಡೆಸಲಾಗುತ್ತಿದೆ. ಬೇರೆ ಬೇರೆ ಕಾಲೇಜುಗಳ ಹೆಸರಲ್ಲಿ ದಾಖಲಾತಿ ಮಾಡಿಸಿಕೊಂಡು, ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಪಡೆದು, ಆನ್ಲೈನ್, ಆಫ್ಲೈನ್ ಕೋಚಿಂಗ್ ಕೊಡಲಾಗುತ್ತಿದೆ. ಬನ್ಸಾಲ್ ಹಾಗೂ ಆಕಾಶ್ ಕೋಚಿಂಗ್ ಸೆಂಟರ್ ಹೆಸರಲ್ಲಿಯೂ ದಾಖಲಾತಿ ಮಾಡಿಸಿಕೊಂಡು ನೂರಾರು ವಿದ್ಯಾರ್ಥಿಗಳನ್ನು ವಂಚಿಸಲಾಗುತ್ತಿದೆ. ಅಧಿಕೃತ ಕಾಲೇಜುಗಳು ಸಹ ನೀಟ್, ಕೆಸಿಇಟಿ, ಜೆಇಇ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ವರ್ಷಕ್ಕೆ ₹1.50 ಲಕ್ಷದಿಂದ ₹2 ಲಕ್ಷ ದವರೆಗೆ ಶುಲ್ಕ ವಸೂಲಿ ಮಾಡುತ್ತಿವೆ. ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಶುಲ್ಕ ಪಡೆಯುತ್ತಿರುವುದರಿಂದ ಮಕ್ಕಳ ಶಿಕ್ಷಣ ಪಾಲಕರಿಗೆ ಹೊರೆಯಾಗಿದೆ. ಶುಲ್ಕ ಕಟ್ಟಲು ವಿಳಂಬ ಮಾಡಿದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಘಟನೆಗಳೂ ನಡೆಯುತ್ತಿವೆ. ಅಧಿಕಾರಿಗಳು ಕೂಡ ಕೋಚಿಂಗ್ ಸೆಂಟರ್ ಮಾಫಿಯಾ ಜತೆ ಕೈಜೋಡಿಸಿದ್ದಾರೆ. ಹೀಗಾಗಿ ಇವುಗಳ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಶಾಲಾ, ಕಾಲೇಜುಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ, ಉಪಾಧ್ಯಕ್ಷ ಸೋಮಶೇಖರ ಸಜ್ಜನ್, ಶಿವರುದ್ರ ಕೀರ್ತಾ, ವಿಜಯಕುಮಾರ ಅಷ್ಟೂರೆ, ಮಲ್ಲು ಸಿಕೇನಪುರ, ಸಚಿನ್ ಬೆನಕನಳ್ಳಿ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಗೌಡ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಹೇಡೆ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಬಂಡೆಪ್ಪ ಕರಬಸಣ್ಣ, ಬೀದರ್ ನಗರ ಘಟಕದ ಅಧ್ಯಕ್ಷ ಶಿವಕುಮಾರ, ಕಮಲನಗರ ತಾಲ್ಲೂಕು ಘಟಕದ ಉಪಾಧ್ಯಕ್ಷ ಮಂಜುನಾಥ ಸ್ವಾಮಿ, ಮುಖಂಡರಾದ ಮಲ್ಲಪ್ಪ ಚಡಪಳ್ಳಿ, ವಿವೇಕ ನಿರ್ಮಳೆ, ಜಮೀರ್ ಬಗದಲ್, ನಾಗೇಶ ಮನ್ನಳ್ಳಿ, ದಯಾನಂದ ವೀರಶೆಟ್ಟೆ, ಕರಬಸಪ್ಪ ವೀರಶೆಟ್ಟೆ, ಪ್ರತಯ್ಯ ಸ್ವಾಮಿ, ಪ್ರಶಾಂತ ಖಾನಾಪುರೆ, ಅಯೂಬ್ ಖುರೇಷಿ, ಇರ್ಷಾದ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಕೋಚಿಂಗ್ ಕೇಂದ್ರ ಹಾಗೂ ಖಾಸಗಿ ಕಾಲೇಜುಗಳು ಅಧಿಕ ಶುಲ್ಕ ಪಡೆಯುತ್ತಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಿತು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಅವರಿಗೆ ಸಲ್ಲಿಸಿದರು.</p>.<p>ನಂತರ ಸಂಘದ ಪ್ರಮುಖರು ಮಾತನಾಡಿ, ನಗರದ ಚಿದ್ರಿ ರಸ್ತೆಯಲ್ಲಿ ಇರುವ ಹನುಮಾನ ನಗರದಲ್ಲಿನ ಫಿಜಿಕ್ಸ್ ವಾಲಾ ವಿದ್ಯಾಪೀಠ ಪಾಠಶಾಲಾ ಕೋಚಿಂಗ್ ಸೆಂಟರ್ ಅನಧಿಕೃತವಾಗಿ ನಡೆಸಲಾಗುತ್ತಿದೆ. ಬೇರೆ ಬೇರೆ ಕಾಲೇಜುಗಳ ಹೆಸರಲ್ಲಿ ದಾಖಲಾತಿ ಮಾಡಿಸಿಕೊಂಡು, ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಪಡೆದು, ಆನ್ಲೈನ್, ಆಫ್ಲೈನ್ ಕೋಚಿಂಗ್ ಕೊಡಲಾಗುತ್ತಿದೆ. ಬನ್ಸಾಲ್ ಹಾಗೂ ಆಕಾಶ್ ಕೋಚಿಂಗ್ ಸೆಂಟರ್ ಹೆಸರಲ್ಲಿಯೂ ದಾಖಲಾತಿ ಮಾಡಿಸಿಕೊಂಡು ನೂರಾರು ವಿದ್ಯಾರ್ಥಿಗಳನ್ನು ವಂಚಿಸಲಾಗುತ್ತಿದೆ. ಅಧಿಕೃತ ಕಾಲೇಜುಗಳು ಸಹ ನೀಟ್, ಕೆಸಿಇಟಿ, ಜೆಇಇ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ವರ್ಷಕ್ಕೆ ₹1.50 ಲಕ್ಷದಿಂದ ₹2 ಲಕ್ಷ ದವರೆಗೆ ಶುಲ್ಕ ವಸೂಲಿ ಮಾಡುತ್ತಿವೆ. ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಶುಲ್ಕ ಪಡೆಯುತ್ತಿರುವುದರಿಂದ ಮಕ್ಕಳ ಶಿಕ್ಷಣ ಪಾಲಕರಿಗೆ ಹೊರೆಯಾಗಿದೆ. ಶುಲ್ಕ ಕಟ್ಟಲು ವಿಳಂಬ ಮಾಡಿದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಘಟನೆಗಳೂ ನಡೆಯುತ್ತಿವೆ. ಅಧಿಕಾರಿಗಳು ಕೂಡ ಕೋಚಿಂಗ್ ಸೆಂಟರ್ ಮಾಫಿಯಾ ಜತೆ ಕೈಜೋಡಿಸಿದ್ದಾರೆ. ಹೀಗಾಗಿ ಇವುಗಳ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಶಾಲಾ, ಕಾಲೇಜುಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ, ಉಪಾಧ್ಯಕ್ಷ ಸೋಮಶೇಖರ ಸಜ್ಜನ್, ಶಿವರುದ್ರ ಕೀರ್ತಾ, ವಿಜಯಕುಮಾರ ಅಷ್ಟೂರೆ, ಮಲ್ಲು ಸಿಕೇನಪುರ, ಸಚಿನ್ ಬೆನಕನಳ್ಳಿ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಗೌಡ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಹೇಡೆ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಬಂಡೆಪ್ಪ ಕರಬಸಣ್ಣ, ಬೀದರ್ ನಗರ ಘಟಕದ ಅಧ್ಯಕ್ಷ ಶಿವಕುಮಾರ, ಕಮಲನಗರ ತಾಲ್ಲೂಕು ಘಟಕದ ಉಪಾಧ್ಯಕ್ಷ ಮಂಜುನಾಥ ಸ್ವಾಮಿ, ಮುಖಂಡರಾದ ಮಲ್ಲಪ್ಪ ಚಡಪಳ್ಳಿ, ವಿವೇಕ ನಿರ್ಮಳೆ, ಜಮೀರ್ ಬಗದಲ್, ನಾಗೇಶ ಮನ್ನಳ್ಳಿ, ದಯಾನಂದ ವೀರಶೆಟ್ಟೆ, ಕರಬಸಪ್ಪ ವೀರಶೆಟ್ಟೆ, ಪ್ರತಯ್ಯ ಸ್ವಾಮಿ, ಪ್ರಶಾಂತ ಖಾನಾಪುರೆ, ಅಯೂಬ್ ಖುರೇಷಿ, ಇರ್ಷಾದ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>