<p><strong>ಔರಾದ್: ‘</strong>ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸರ್ಕಾರ ತಯಾರಿದೆ. ಇದಕ್ಕೆ ಸ್ಥಳೀಯರ ಸಹಕಾರ ಅಗತ್ಯ’ ಎಂದು ತಹಶೀಲ್ದಾರ್ ಮಹೇಶ್ ಪಾಟೀಲ ಹೇಳಿದರು.</p>.<p>ಅಮರೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ಶ್ರಾವಣ ಮಾಸದ ಪ್ರವಚನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಹೊಸ ಮಹಾದ್ವಾರ ಸೇರಿದಂತೆ ದೇವಸ್ಥಾನ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಿ ಹಂತ ಹಂತವಾಗಿ ಕಾಮಗಾರಿ ಮಾಡಲಾಗುವುದು ಎಂದು ತಿಳಿಸಿದರು. </p>.<p>ಪ್ರವಚನಕಾರ ವೇದಮೂರ್ತಿ ನವೀನ ಶಾಸ್ತ್ರಿ ಮಾತನಾಡಿ ಇಂತಹ ಉದ್ಭವಲಿಂಗ ಅಮರೇಶ್ವರ ದೇವಸ್ಥಾನದಲ್ಲಿ ಪ್ರವಚನ ಹೇಳುವುದು, ಕೇಳುವುದು ಬಹಳ ಒಳ್ಳೆ ಕೆಲಸ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು. <br /> ಹಿರಿಯ ಮುಖಂಡ ಬಸವರಾಜ ದೇಶಮುಖ, ಶರಣಪ್ಪ ಪಂಚಾಕ್ಷರಿ, ಬಸವರಾಜ ಚ್ಯಾರೆ, ಸಿದ್ದರಾಮ ಹಳೆಂಬುರೆ, ಸೂರ್ಯಕಾಂತ ಬುಟ್ಟೆ, ರಾಜಕುಮಾರ ಚಿದ್ರೆ, ಪುರುಷೋತ್ತಮ ದೇಸಾಯಿ, ಮಾಣಿಕರಾವ ಗುಡೂರೆ ನೀಲಕಂಠ ಬಾವುಗೆ, ರವಿ ಸ್ವಾಮಿ, ಶರಣಪ್ಪ ಚಿಟ್ಮೆ, ಅಮರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: ‘</strong>ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸರ್ಕಾರ ತಯಾರಿದೆ. ಇದಕ್ಕೆ ಸ್ಥಳೀಯರ ಸಹಕಾರ ಅಗತ್ಯ’ ಎಂದು ತಹಶೀಲ್ದಾರ್ ಮಹೇಶ್ ಪಾಟೀಲ ಹೇಳಿದರು.</p>.<p>ಅಮರೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ಶ್ರಾವಣ ಮಾಸದ ಪ್ರವಚನ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಹೊಸ ಮಹಾದ್ವಾರ ಸೇರಿದಂತೆ ದೇವಸ್ಥಾನ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಿ ಹಂತ ಹಂತವಾಗಿ ಕಾಮಗಾರಿ ಮಾಡಲಾಗುವುದು ಎಂದು ತಿಳಿಸಿದರು. </p>.<p>ಪ್ರವಚನಕಾರ ವೇದಮೂರ್ತಿ ನವೀನ ಶಾಸ್ತ್ರಿ ಮಾತನಾಡಿ ಇಂತಹ ಉದ್ಭವಲಿಂಗ ಅಮರೇಶ್ವರ ದೇವಸ್ಥಾನದಲ್ಲಿ ಪ್ರವಚನ ಹೇಳುವುದು, ಕೇಳುವುದು ಬಹಳ ಒಳ್ಳೆ ಕೆಲಸ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು. <br /> ಹಿರಿಯ ಮುಖಂಡ ಬಸವರಾಜ ದೇಶಮುಖ, ಶರಣಪ್ಪ ಪಂಚಾಕ್ಷರಿ, ಬಸವರಾಜ ಚ್ಯಾರೆ, ಸಿದ್ದರಾಮ ಹಳೆಂಬುರೆ, ಸೂರ್ಯಕಾಂತ ಬುಟ್ಟೆ, ರಾಜಕುಮಾರ ಚಿದ್ರೆ, ಪುರುಷೋತ್ತಮ ದೇಸಾಯಿ, ಮಾಣಿಕರಾವ ಗುಡೂರೆ ನೀಲಕಂಠ ಬಾವುಗೆ, ರವಿ ಸ್ವಾಮಿ, ಶರಣಪ್ಪ ಚಿಟ್ಮೆ, ಅಮರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>