<p><strong>ಜನವಾಡ:</strong> ಕುಡಿಯುವ ನೀರಿನ ಬವಣೆ ತಪ್ಪಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಮಳೆ ನೀರು ವ್ಯರ್ಥವಾಗಿ ಹೋಗದಂತೆ ಸಂಗ್ರಹಿಸಬೇಕು ಎಂದು ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಮಯೂರಕುಮಾರ ಗೊರಮೆ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಹಮಿಲಾಪೂರ ಗ್ರಾಮದ ವಿ.ಎಂ. ರಾಂಪೂರೆ ಪಬ್ಲಿಕ್ ಸ್ಕೂಲ್ನಲ್ಲಿ ‘ಕ್ಯಾಚ್ ದಿ ರೇನ್ ವೇರ್ ಇಟ್ ವಾಲ್ಸ್, ವೆನ್ ಇಟ್ ಫಾಲ್ಸ್’ ಶೀರ್ಷಿಕೆಯಡಿ ಆಯೋಜಿಸಿದ್ದ ಜಲ ಜಾಗೃತಿ ಕಾರ್ಯಕ್ರಮವನ್ನು ಸಸಿಗೆ ನೀರೆರೆದು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನೀರನ್ನು ಹಿತ ಮಿತವಾಗಿ ಬಳಸುವ ಕುರಿತು ವ್ಯಾಪಕ ಜಾಗೃತಿ ನಡೆಯಬೇಕು. ಮರ ಗಿಡಗಳಿದ್ದರೆ ಮಾತ್ರ ಮಳೆ ಚೆನ್ನಾಗಿ ಬರುತ್ತದೆ. ಹೀಗಾಗಿ ಸಸಿಗಳನ್ನು ಹೆಚ್ಚಾಗಿ ನೆಡಬೇಕು ಎಂದು ಸಲಹೆ ಮಾಡಿದರು.</p>.<p>ಮಳೆಯ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಿದೆ. ಕಾರಣ, ಬಿದ್ದ ಮಳೆ ನೀರನ್ನೇ ಸಂಗ್ರಹಿಸಿ, ಭೂಮಿಯಲ್ಲಿ ಇಂಗಿಸಿ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಹೇಳಿದರು.</p>.<p>ಬರಮುಕ್ತಿಗಾಗಿ ಮಳೆ ನೀರಿನ ಸಂರಕ್ಷಣೆ ಅಗತ್ಯವಾಗಿದೆ. ಮುಂದಿನ ಪೀಳಿಗೆಗೂ ಜೀವಜಲ ಉಳಿಸಿಕೊಳ್ಳುವ ಕೆಲಸ ಆಗಬೇಕಾಗಿದೆ ಎಂದರು.</p>.<p>ರಾಂಪೂರೆ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಮಹೇಶ ಎಸ್. ರಾಂಪೂರೆ, ಓಂಪ್ರಕಾಶ ರೊಟ್ಟೆ, ಗಾದಗಿ ಪಂಚಾಯಿತಿ ಉಪಾಧ್ಯಕ್ಷ ಎಂ.ಡಿ. ಸಿರಾಜೊದ್ದಿನ್, ಅಭಿವೃದ್ಧಿ ಅಧಿಕಾರಿ ಶ್ರೀಧರ ಗೌಡ, ಪ್ರಮುಖರಾದ ಓಂಪ್ರಕಾಶ ಉಪ್ಪೆ, ಸಿದ್ರಾಮ ಘಂಟೆ, ಕಾಶೀನಾಥ ಕೋಳಿ, ಸಯ್ಯದ್ ಮಿನಾಜ್ ಉಪಸ್ಥಿತರಿದ್ದರು.</p>.<p>ರಾಜಪ್ಪ ಮೇತ್ರೆ ಸ್ವಾಗತಿಸಿದರು. ಆಕಾಶ ಬೆಳ್ಳೂರೆ ವಂದಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರೂ ಯುವ ಕೇಂದ್ರ, ಗಾದಗಿ ಗ್ರಾಮ ಪಂಚಾಯಿತಿ, ಬುದ್ಧಿಸ್ಟ್ ಎಜುಕೇಶನ್ ಆ್ಯಂಡ್ ಚಾರಿಟಬಲ್ ಟ್ರಸ್ಟ್, ವಿ.ಎಂ. ರಾಂಪೂರೆ ಪಬ್ಲಿಕ್ ಸ್ಕೂಲ್ ಹಾಗೂ ದ ಬುದ್ಧ ಯುತ್ ಕ್ಲಬ್ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜನವಾಡ:</strong> ಕುಡಿಯುವ ನೀರಿನ ಬವಣೆ ತಪ್ಪಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಮಳೆ ನೀರು ವ್ಯರ್ಥವಾಗಿ ಹೋಗದಂತೆ ಸಂಗ್ರಹಿಸಬೇಕು ಎಂದು ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಮಯೂರಕುಮಾರ ಗೊರಮೆ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಹಮಿಲಾಪೂರ ಗ್ರಾಮದ ವಿ.ಎಂ. ರಾಂಪೂರೆ ಪಬ್ಲಿಕ್ ಸ್ಕೂಲ್ನಲ್ಲಿ ‘ಕ್ಯಾಚ್ ದಿ ರೇನ್ ವೇರ್ ಇಟ್ ವಾಲ್ಸ್, ವೆನ್ ಇಟ್ ಫಾಲ್ಸ್’ ಶೀರ್ಷಿಕೆಯಡಿ ಆಯೋಜಿಸಿದ್ದ ಜಲ ಜಾಗೃತಿ ಕಾರ್ಯಕ್ರಮವನ್ನು ಸಸಿಗೆ ನೀರೆರೆದು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನೀರನ್ನು ಹಿತ ಮಿತವಾಗಿ ಬಳಸುವ ಕುರಿತು ವ್ಯಾಪಕ ಜಾಗೃತಿ ನಡೆಯಬೇಕು. ಮರ ಗಿಡಗಳಿದ್ದರೆ ಮಾತ್ರ ಮಳೆ ಚೆನ್ನಾಗಿ ಬರುತ್ತದೆ. ಹೀಗಾಗಿ ಸಸಿಗಳನ್ನು ಹೆಚ್ಚಾಗಿ ನೆಡಬೇಕು ಎಂದು ಸಲಹೆ ಮಾಡಿದರು.</p>.<p>ಮಳೆಯ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಿದೆ. ಕಾರಣ, ಬಿದ್ದ ಮಳೆ ನೀರನ್ನೇ ಸಂಗ್ರಹಿಸಿ, ಭೂಮಿಯಲ್ಲಿ ಇಂಗಿಸಿ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಹೇಳಿದರು.</p>.<p>ಬರಮುಕ್ತಿಗಾಗಿ ಮಳೆ ನೀರಿನ ಸಂರಕ್ಷಣೆ ಅಗತ್ಯವಾಗಿದೆ. ಮುಂದಿನ ಪೀಳಿಗೆಗೂ ಜೀವಜಲ ಉಳಿಸಿಕೊಳ್ಳುವ ಕೆಲಸ ಆಗಬೇಕಾಗಿದೆ ಎಂದರು.</p>.<p>ರಾಂಪೂರೆ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಮಹೇಶ ಎಸ್. ರಾಂಪೂರೆ, ಓಂಪ್ರಕಾಶ ರೊಟ್ಟೆ, ಗಾದಗಿ ಪಂಚಾಯಿತಿ ಉಪಾಧ್ಯಕ್ಷ ಎಂ.ಡಿ. ಸಿರಾಜೊದ್ದಿನ್, ಅಭಿವೃದ್ಧಿ ಅಧಿಕಾರಿ ಶ್ರೀಧರ ಗೌಡ, ಪ್ರಮುಖರಾದ ಓಂಪ್ರಕಾಶ ಉಪ್ಪೆ, ಸಿದ್ರಾಮ ಘಂಟೆ, ಕಾಶೀನಾಥ ಕೋಳಿ, ಸಯ್ಯದ್ ಮಿನಾಜ್ ಉಪಸ್ಥಿತರಿದ್ದರು.</p>.<p>ರಾಜಪ್ಪ ಮೇತ್ರೆ ಸ್ವಾಗತಿಸಿದರು. ಆಕಾಶ ಬೆಳ್ಳೂರೆ ವಂದಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರೂ ಯುವ ಕೇಂದ್ರ, ಗಾದಗಿ ಗ್ರಾಮ ಪಂಚಾಯಿತಿ, ಬುದ್ಧಿಸ್ಟ್ ಎಜುಕೇಶನ್ ಆ್ಯಂಡ್ ಚಾರಿಟಬಲ್ ಟ್ರಸ್ಟ್, ವಿ.ಎಂ. ರಾಂಪೂರೆ ಪಬ್ಲಿಕ್ ಸ್ಕೂಲ್ ಹಾಗೂ ದ ಬುದ್ಧ ಯುತ್ ಕ್ಲಬ್ ಆಶ್ರಯದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>