<p><strong>ಬೀದರ್:</strong> ಕೋವಿಡ್ ಸೋಂಕಿನಿಂದ ಸ್ಥಗಿತಗೊಂಡಿದ್ದ ಜಿಲ್ಲೆಯ ಪದವಿ ಕಾಲೇಜುಗಳ ತರಗತಿಗಳು ಮಂಗಳವಾರ ಪುನರಾರಂಭಗೊಂಡವು.</p>.<p>ಆನ್ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು. ಸುದೀರ್ಘ ಅವಧಿಯಿಂದ ಮನೆಯಲ್ಲೇ ಇದ್ದ ವಿದ್ಯಾರ್ಥಿಗಳು ಕಾಲೇಜಿನತ್ತ ಹೆಜ್ಜೆ ಹಾಕಿದರು. ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಂಡು ಹಾಕಲಾಗಿದ್ದ ಬೆಂಚ್ಗಳಲ್ಲಿ ಕುಳಿತು ಪಾಠ ಆಲಿಸಿದರು.</p>.<p>ನಗರದ ವಿವಿಧ ಕಾಲೇಜುಗಳಲ್ಲಿ ತರಗತಿ ಆರಂಭದ ಕಾರಣ ಕೋವಿಡ್ ನಿಯಮಗಳ ಪಾಲನೆಗೆ ಒತ್ತು ನೀಡಿದ್ದು ಕಂಡುಬಂದಿತು. ತರಗತಿಗಳು ಶುರುವಾದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಸಂತಸ ಮನೆ ಮಾಡಿತ್ತು.</p>.<p class="Subhead">ಮಾಸ್ಕ್ ಉಚಿತ ವಿತರಣೆ: ನಗರದ ವಿದ್ಯಾನಗರ ಕಾಲೊನಿಯಲ್ಲಿ ಇರುವ ವಿ.ಕೆ. ಇಂಟರ್ನ್ಯಾಷನಲ್ ಪದವಿ ಕಾಲೇಜು ಹಾಗೂ ಲಕ್ಷ್ಮೀಬಾಯಿ ಕಮಠಾಣೆ ಬಿ.ಇಡಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ಉಚಿತವಾಗಿ ವಿತರಿಸಲಾಯಿತು.</p>.<p>ಕಾಲೇಜಿಗೆ ಬಂದ ವಿದ್ಯಾರ್ಥಿ ಗಳನ್ನು ಕಾಲೇಜು ಸಿಬ್ಬಂದಿ ಸ್ವಾಗತಿಸಿ ಬರಮಾಡಿ ಕೊಂಡರು. ಮಾಸ್ಕ್ ಇಲ್ಲದವರಿಗೆ ಸ್ಥಳದಲ್ಲೇ ಮಾಸ್ಕ್ ಒದಗಿಸಲಾಯಿತು. ಮಾಸ್ಕ್ ಧರಿಸಿರುವುದನ್ನು ಖಚಿತಪಡಿಸಿಕೊಂಡು, ಕೈಗೆ ಸ್ಯಾನಿಟೈಸರ್ ಹಾಕಿ ವಿದ್ಯಾರ್ಥಿಗಳನ್ನು ವರ್ಗ ಕೋಣೆಗೆ ಬಿಡಲಾಯಿತು.<br />ಮೂರು ಅಡಿ ಅಂತರದಲ್ಲಿ ಹಾಕಿದ್ದ ಬೆಂಚ್ಗಳ ಮೇಲೆ ತಲಾ ಒಬ್ಬರಿಗೆ ಮಾತ್ರ ಕೂಡಲು ಅವಕಾಶ ಕಲ್ಪಿಸಿ ಸುರಕ್ಷಿತ ಅಂತರ ಕಾಪಾಡಲಾಯಿತು.</p>.<p>ಕೋವಿಡ್ನಿಂದಾಗಿ ಫೆಬ್ರುವರಿ ಯಿಂದ ಶಾಲಾ, ಕಾಲೇಜುಗಳು ನಡೆದಿಲ್ಲ. ಉನ್ನತ ಶಿಕ್ಷಣ ಇಲಾಖೆ ಆದೇಶದ ಅನ್ವಯ ಇದೀಗ ಪದವಿ ಕಾಲೇಜು ತರಗತಿಗಳನ್ನು ಆರಂಭಿಸಲಾಗಿದೆ ಎಂದು ಲಕ್ಷ್ಮೀಬಾಯಿ ಕಮಠಾಣೆ ಬಿ.ಇಡಿ ಕಾಲೇಜು ಪ್ರಾಚಾರ್ಯ ಡಾ. ದಿಲೀಪ್ ಕಮಠಾಣೆ ತಿಳಿಸಿದರು.</p>.<p>ಕೋವಿಡ್ ತಡೆಗೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಸುರಕ್ಷಿತ ಅಂತರ ಕಾಪಾಡುವುದು ಸೇರಿದಂತೆ ಕಾಲೇಜಿ ನಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಚಾಚೂತಪ್ಪದೇ ಪಾಲಿಸಲಾಗುವುದು ಎಂದು ಹೇಳಿದರು.</p>.<p>ಲಕ್ಷ್ಮೀಬಾಯಿ ಕಮಠಾಣೆ ಬಿ.ಇಡಿ ಕಾಲೇಜು ಉಪ ಪ್ರಾಚಾರ್ಯ ಧನರಾಜ ಪಾಟೀಲ, ವಿ.ಕೆ. ಇಂಟರ್ನ್ಯಾಷನಲ್ ಪದವಿ ಕಾಲೇಜು ಪ್ರಾಚಾರ್ಯೆ ಶಿವಲೀಲಾ ಟೊಣ್ಣೆ, ಆಡಳಿತಾಧಿಕಾರಿ ಜಿನ್ಸ್ ಕೆ. ಥಾಮಸ್, ಉಪನ್ಯಾಸಕರಾದ ರವೀಂದ್ರ ದೇವಾ, ನಾಗೇಶ ಬಿರಾದಾರ, ಪ್ರದೀಪ ಗಾಜುಲ್, ಝರಣಪ್ಪ ಹೊಸಳ್ಳಿ ಇದ್ದರು.</p>.<p>ಇದಕ್ಕೂ ಮುನ್ನ ಬಸವ ತತ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೈಜಿನಾಥ ಕಮಠಾಣೆ ಅವರು ತರಗತಿ ಪ್ರಾರಂಭದ ನಿಮಿತ್ತ ಕಾಲೇಜಿನಲ್ಲಿ ಮಾಡಿಕೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿದರು. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸುವಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.</p>.<p>ಸರ್ಕಾರದ ಆದೇಶದಂತೆ ಪಾಲಕರ ಮುಚ್ಚಳಿಕೆ ಪತ್ರ ಬರೆಸಿಕೊಂಡು ಬರಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕೋವಿಡ್ ಸೋಂಕಿನಿಂದ ಸ್ಥಗಿತಗೊಂಡಿದ್ದ ಜಿಲ್ಲೆಯ ಪದವಿ ಕಾಲೇಜುಗಳ ತರಗತಿಗಳು ಮಂಗಳವಾರ ಪುನರಾರಂಭಗೊಂಡವು.</p>.<p>ಆನ್ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು. ಸುದೀರ್ಘ ಅವಧಿಯಿಂದ ಮನೆಯಲ್ಲೇ ಇದ್ದ ವಿದ್ಯಾರ್ಥಿಗಳು ಕಾಲೇಜಿನತ್ತ ಹೆಜ್ಜೆ ಹಾಕಿದರು. ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಂಡು ಹಾಕಲಾಗಿದ್ದ ಬೆಂಚ್ಗಳಲ್ಲಿ ಕುಳಿತು ಪಾಠ ಆಲಿಸಿದರು.</p>.<p>ನಗರದ ವಿವಿಧ ಕಾಲೇಜುಗಳಲ್ಲಿ ತರಗತಿ ಆರಂಭದ ಕಾರಣ ಕೋವಿಡ್ ನಿಯಮಗಳ ಪಾಲನೆಗೆ ಒತ್ತು ನೀಡಿದ್ದು ಕಂಡುಬಂದಿತು. ತರಗತಿಗಳು ಶುರುವಾದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಸಂತಸ ಮನೆ ಮಾಡಿತ್ತು.</p>.<p class="Subhead">ಮಾಸ್ಕ್ ಉಚಿತ ವಿತರಣೆ: ನಗರದ ವಿದ್ಯಾನಗರ ಕಾಲೊನಿಯಲ್ಲಿ ಇರುವ ವಿ.ಕೆ. ಇಂಟರ್ನ್ಯಾಷನಲ್ ಪದವಿ ಕಾಲೇಜು ಹಾಗೂ ಲಕ್ಷ್ಮೀಬಾಯಿ ಕಮಠಾಣೆ ಬಿ.ಇಡಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ಉಚಿತವಾಗಿ ವಿತರಿಸಲಾಯಿತು.</p>.<p>ಕಾಲೇಜಿಗೆ ಬಂದ ವಿದ್ಯಾರ್ಥಿ ಗಳನ್ನು ಕಾಲೇಜು ಸಿಬ್ಬಂದಿ ಸ್ವಾಗತಿಸಿ ಬರಮಾಡಿ ಕೊಂಡರು. ಮಾಸ್ಕ್ ಇಲ್ಲದವರಿಗೆ ಸ್ಥಳದಲ್ಲೇ ಮಾಸ್ಕ್ ಒದಗಿಸಲಾಯಿತು. ಮಾಸ್ಕ್ ಧರಿಸಿರುವುದನ್ನು ಖಚಿತಪಡಿಸಿಕೊಂಡು, ಕೈಗೆ ಸ್ಯಾನಿಟೈಸರ್ ಹಾಕಿ ವಿದ್ಯಾರ್ಥಿಗಳನ್ನು ವರ್ಗ ಕೋಣೆಗೆ ಬಿಡಲಾಯಿತು.<br />ಮೂರು ಅಡಿ ಅಂತರದಲ್ಲಿ ಹಾಕಿದ್ದ ಬೆಂಚ್ಗಳ ಮೇಲೆ ತಲಾ ಒಬ್ಬರಿಗೆ ಮಾತ್ರ ಕೂಡಲು ಅವಕಾಶ ಕಲ್ಪಿಸಿ ಸುರಕ್ಷಿತ ಅಂತರ ಕಾಪಾಡಲಾಯಿತು.</p>.<p>ಕೋವಿಡ್ನಿಂದಾಗಿ ಫೆಬ್ರುವರಿ ಯಿಂದ ಶಾಲಾ, ಕಾಲೇಜುಗಳು ನಡೆದಿಲ್ಲ. ಉನ್ನತ ಶಿಕ್ಷಣ ಇಲಾಖೆ ಆದೇಶದ ಅನ್ವಯ ಇದೀಗ ಪದವಿ ಕಾಲೇಜು ತರಗತಿಗಳನ್ನು ಆರಂಭಿಸಲಾಗಿದೆ ಎಂದು ಲಕ್ಷ್ಮೀಬಾಯಿ ಕಮಠಾಣೆ ಬಿ.ಇಡಿ ಕಾಲೇಜು ಪ್ರಾಚಾರ್ಯ ಡಾ. ದಿಲೀಪ್ ಕಮಠಾಣೆ ತಿಳಿಸಿದರು.</p>.<p>ಕೋವಿಡ್ ತಡೆಗೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಸುರಕ್ಷಿತ ಅಂತರ ಕಾಪಾಡುವುದು ಸೇರಿದಂತೆ ಕಾಲೇಜಿ ನಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಚಾಚೂತಪ್ಪದೇ ಪಾಲಿಸಲಾಗುವುದು ಎಂದು ಹೇಳಿದರು.</p>.<p>ಲಕ್ಷ್ಮೀಬಾಯಿ ಕಮಠಾಣೆ ಬಿ.ಇಡಿ ಕಾಲೇಜು ಉಪ ಪ್ರಾಚಾರ್ಯ ಧನರಾಜ ಪಾಟೀಲ, ವಿ.ಕೆ. ಇಂಟರ್ನ್ಯಾಷನಲ್ ಪದವಿ ಕಾಲೇಜು ಪ್ರಾಚಾರ್ಯೆ ಶಿವಲೀಲಾ ಟೊಣ್ಣೆ, ಆಡಳಿತಾಧಿಕಾರಿ ಜಿನ್ಸ್ ಕೆ. ಥಾಮಸ್, ಉಪನ್ಯಾಸಕರಾದ ರವೀಂದ್ರ ದೇವಾ, ನಾಗೇಶ ಬಿರಾದಾರ, ಪ್ರದೀಪ ಗಾಜುಲ್, ಝರಣಪ್ಪ ಹೊಸಳ್ಳಿ ಇದ್ದರು.</p>.<p>ಇದಕ್ಕೂ ಮುನ್ನ ಬಸವ ತತ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೈಜಿನಾಥ ಕಮಠಾಣೆ ಅವರು ತರಗತಿ ಪ್ರಾರಂಭದ ನಿಮಿತ್ತ ಕಾಲೇಜಿನಲ್ಲಿ ಮಾಡಿಕೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿದರು. ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸುವಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.</p>.<p>ಸರ್ಕಾರದ ಆದೇಶದಂತೆ ಪಾಲಕರ ಮುಚ್ಚಳಿಕೆ ಪತ್ರ ಬರೆಸಿಕೊಂಡು ಬರಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>