<p><strong>ಭಾಲ್ಕಿ</strong>: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ವಿದ್ಯಾರ್ಥಿಗಳು ಪದವಿ ಪ್ರಥಮ ವರ್ಷದಿಂದಲೇ ಉತ್ತಮ ತಯಾರಿ ನಡೆಸುವುದು ಅತ್ಯಗತ್ಯ ಎಂದು ಹುಮನಾಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವೀರಣ್ಣ ತುಪ್ಪದ್ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿವಿಧ ಕೋರ್ಸ್ನ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಸಾಧನೆಗೆ ಬೇಕಾಗಿರುವುದು ನಿರಂತರ ಪ್ರಯತ್ನ, ಸತತ ಅಧ್ಯಯನ, ಗುರುಗಳ ಮಾರ್ಗದರ್ಶನ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಹೇಮಾವತಿ ಪಾಟೀಲ ಮಾತನಾಡಿ, ಶೈಕ್ಷಣಿಕ ಪ್ರಗತಿಯೊಂದಿಗೆ ವಿದ್ಯಾರ್ಥಿಗಳು ಸುಸಂಸ್ಕೃತಿ ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳೆಲ್ಲರೂ ಕಾಲೇಜಿನಲ್ಲಿ ದೊರೆಯುವ ಉತ್ತಮವಾದ ಸೌಲಭ್ಯಗಳು ಹಾಗೂ ಹಿರಿಯ ಪ್ರಾಧ್ಯಾಪಕರ ಸೇವೆಯನ್ನು ಸಂಪೂರ್ಣವಾಗಿ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಶ್ರೀದೇವಿ ಕಟ್ಟಿಮನಿ, ಸಂಪತ್ ಕುಮಾರಿ, ರವಿ ಮೇಟಿ ಮಾತನಾಡಿದರು.</p>.<p>ಪ್ರಮುಖರಾದ ನಾಗಮ್ಮ ಬಂಗರಗಿ, ನಾಗೇಂದ್ರಪ್ಪ, ಕೃಷ್ಣಮೂರ್ತಿ ಸೋಮನಾಥ, ಪ್ರದೀಪ, ಅಶೋಕ, ಶ್ರೀಕಾಂತ, ಧೋಂಡಿಬಾ, ವಿಜಯಕುಮಾರ, ರಮೇಶ, ಸೋಮನಾಥ, ವನಿತಾ ಬಾಂಗೆ, ಸಪ್ನಾ, ಸಂಗೀತಾ ಡೋಣೆ, ಜೈಶ್ರೀ, ದಿವ್ಯಜ್ಯೋತಿ ಸೇರಿದಂತೆ ಇತರರು ಇದ್ದರು.</p>.<p>ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದವರ ಮನ ರಂಜಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ವಿದ್ಯಾರ್ಥಿಗಳು ಪದವಿ ಪ್ರಥಮ ವರ್ಷದಿಂದಲೇ ಉತ್ತಮ ತಯಾರಿ ನಡೆಸುವುದು ಅತ್ಯಗತ್ಯ ಎಂದು ಹುಮನಾಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವೀರಣ್ಣ ತುಪ್ಪದ್ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿವಿಧ ಕೋರ್ಸ್ನ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಸಾಧನೆಗೆ ಬೇಕಾಗಿರುವುದು ನಿರಂತರ ಪ್ರಯತ್ನ, ಸತತ ಅಧ್ಯಯನ, ಗುರುಗಳ ಮಾರ್ಗದರ್ಶನ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಹೇಮಾವತಿ ಪಾಟೀಲ ಮಾತನಾಡಿ, ಶೈಕ್ಷಣಿಕ ಪ್ರಗತಿಯೊಂದಿಗೆ ವಿದ್ಯಾರ್ಥಿಗಳು ಸುಸಂಸ್ಕೃತಿ ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳೆಲ್ಲರೂ ಕಾಲೇಜಿನಲ್ಲಿ ದೊರೆಯುವ ಉತ್ತಮವಾದ ಸೌಲಭ್ಯಗಳು ಹಾಗೂ ಹಿರಿಯ ಪ್ರಾಧ್ಯಾಪಕರ ಸೇವೆಯನ್ನು ಸಂಪೂರ್ಣವಾಗಿ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಶ್ರೀದೇವಿ ಕಟ್ಟಿಮನಿ, ಸಂಪತ್ ಕುಮಾರಿ, ರವಿ ಮೇಟಿ ಮಾತನಾಡಿದರು.</p>.<p>ಪ್ರಮುಖರಾದ ನಾಗಮ್ಮ ಬಂಗರಗಿ, ನಾಗೇಂದ್ರಪ್ಪ, ಕೃಷ್ಣಮೂರ್ತಿ ಸೋಮನಾಥ, ಪ್ರದೀಪ, ಅಶೋಕ, ಶ್ರೀಕಾಂತ, ಧೋಂಡಿಬಾ, ವಿಜಯಕುಮಾರ, ರಮೇಶ, ಸೋಮನಾಥ, ವನಿತಾ ಬಾಂಗೆ, ಸಪ್ನಾ, ಸಂಗೀತಾ ಡೋಣೆ, ಜೈಶ್ರೀ, ದಿವ್ಯಜ್ಯೋತಿ ಸೇರಿದಂತೆ ಇತರರು ಇದ್ದರು.</p>.<p>ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದವರ ಮನ ರಂಜಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>