ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಮನೀಷ್ ಅಗ್ನಿಹೋತ್ರಿ ಇತ್ತೀಚೆಗೆ ಹೊರಡಿಸಿದ ಆದೇಶದ ಪ್ರಕಾರ, ನಿಗಮದ ನೇಕಾರರು ಭವಿಷ್ಯ ನಿಧಿ, ನೌಕರರ ಪಿಂಚಣಿ ಯೋಜನೆ ಮತ್ತು ಉದ್ಯೋಗಿಗಳ ಠೇವಣಿ ಆಧಾರಿತ ವಿಮೆ ಯೋಜನೆಗಳ ಸೌಲಭ್ಯ ಪಡೆಯಬಹುದು. ನಿಗಮವು ₹ 20.36 ಕೋಟಿಗಳಷ್ಟು ಮೊತ್ತವನ್ನು ನೌಕರರ ಭವಿಷ್ಯನಿಧಿ ವಂತಿಗೆ ಪಾವತಿಸಬೇಕಿದೆ.