<p>ಬೀದರ್: ಕಳ್ಳಬಟ್ಟಿ ತಯಾರಿಕೆ, ಸಾಗಣೆ ಹಾಗೂ ಮಾರಾಟ ತಡೆಗೆ ಅಬಕಾರಿ, ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸಂಪೂರ್ಣ ನಿಯಂತ್ರಣಕ್ಕೆ ತರಬೇಕು ಎಂದು ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿಯಲ್ಲಿ ಸೂಚಿಸಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ರೂಢಿಗತ ಆರೋಪಿಗಳ ವಿರುದ್ಧ ಸಿ.ಆರ್.ಪಿ.ಸಿ ಕಾಯ್ದೆ ಮತ್ತು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಬೇಕು. ಕಳ್ಳಬಟ್ಟಿ ಪೀಡಿತ ಪ್ರದೇಶಗಳಲ್ಲಿ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಹಕಾರದೊಂದಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಬೀದರ್ ಜಿಲ್ಲೆಗೆ ಎರಡು ರಾಜ್ಯಗಳ ಗಡಿಗಳಿವೆ. ಗಡಿ ಆಚೆಯಿಂದ ಯಾವುದೇ ರೀತಿಯ ಮದ್ಯ ಸರಬರಾಜು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಡಿಯಲ್ಲಿ ಬೆಳೆಗಳ ಮಧ್ಯೆ ಅಫಿಮು, ಗಾಂಜಾ, ಬೆಳೆ ಸಾಗುವಳಿ ಮಾಡಿದ್ದರೆ ಪತ್ತೆ ಹಚ್ಚಿ ನಾಶ ಮಾಡಬೇಕು. ನಿಷೇಧಿತ ಔಷಧಿಗಳು ಮಾರಾಟವಾಗಂತೆ ಎಚ್ಚರವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.</p>.<p>ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ ಎನ್ , ‘ಕಳೆದ ಒಂದು ವರ್ಷದ ಅವಧಿಯಲ್ಲಿ ಗಡಿ ಪ್ರದೇಶದಲ್ಲಿ ವಿವಿಧೆಡೆ ದಾಳಿ ನಡೆಸಿ ಕಳ್ಳಬಟ್ಟಿ ತಯಾರಿಕೆಯನ್ನು ನಿಯಂತ್ರಿಸಲಾಗಿದೆ. ಕಬ್ಬಿನ ಹೊಲಗಳಲ್ಲಿ ಬೆಳೆಗಳ ಮಧ್ಯೆ ಬೆಳೆದಿದ್ದ ಗಾಂಜಾ ನಾಶ ಪಡಿಸಿ ಹೊಲಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶಿವಶಂಕರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಕೀರ್ತನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ, ಬೀದರ್ ಜಿಲ್ಲಾ ಕೆಮಿಕಲ್ ಹಾಗೂ ಔಷಧ ವಿತರಕರ ಸಂಘದ ಅಧ್ಯಕ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಕಳ್ಳಬಟ್ಟಿ ತಯಾರಿಕೆ, ಸಾಗಣೆ ಹಾಗೂ ಮಾರಾಟ ತಡೆಗೆ ಅಬಕಾರಿ, ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸಂಪೂರ್ಣ ನಿಯಂತ್ರಣಕ್ಕೆ ತರಬೇಕು ಎಂದು ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿಯಲ್ಲಿ ಸೂಚಿಸಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ರೂಢಿಗತ ಆರೋಪಿಗಳ ವಿರುದ್ಧ ಸಿ.ಆರ್.ಪಿ.ಸಿ ಕಾಯ್ದೆ ಮತ್ತು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಬೇಕು. ಕಳ್ಳಬಟ್ಟಿ ಪೀಡಿತ ಪ್ರದೇಶಗಳಲ್ಲಿ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಹಕಾರದೊಂದಿಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಬೀದರ್ ಜಿಲ್ಲೆಗೆ ಎರಡು ರಾಜ್ಯಗಳ ಗಡಿಗಳಿವೆ. ಗಡಿ ಆಚೆಯಿಂದ ಯಾವುದೇ ರೀತಿಯ ಮದ್ಯ ಸರಬರಾಜು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಡಿಯಲ್ಲಿ ಬೆಳೆಗಳ ಮಧ್ಯೆ ಅಫಿಮು, ಗಾಂಜಾ, ಬೆಳೆ ಸಾಗುವಳಿ ಮಾಡಿದ್ದರೆ ಪತ್ತೆ ಹಚ್ಚಿ ನಾಶ ಮಾಡಬೇಕು. ನಿಷೇಧಿತ ಔಷಧಿಗಳು ಮಾರಾಟವಾಗಂತೆ ಎಚ್ಚರವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.</p>.<p>ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ ಎನ್ , ‘ಕಳೆದ ಒಂದು ವರ್ಷದ ಅವಧಿಯಲ್ಲಿ ಗಡಿ ಪ್ರದೇಶದಲ್ಲಿ ವಿವಿಧೆಡೆ ದಾಳಿ ನಡೆಸಿ ಕಳ್ಳಬಟ್ಟಿ ತಯಾರಿಕೆಯನ್ನು ನಿಯಂತ್ರಿಸಲಾಗಿದೆ. ಕಬ್ಬಿನ ಹೊಲಗಳಲ್ಲಿ ಬೆಳೆಗಳ ಮಧ್ಯೆ ಬೆಳೆದಿದ್ದ ಗಾಂಜಾ ನಾಶ ಪಡಿಸಿ ಹೊಲಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶಿವಶಂಕರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಕೀರ್ತನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ, ಬೀದರ್ ಜಿಲ್ಲಾ ಕೆಮಿಕಲ್ ಹಾಗೂ ಔಷಧ ವಿತರಕರ ಸಂಘದ ಅಧ್ಯಕ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>