ನಿಗಮ, ಮಂಡಳಿಯಲ್ಲಿ ಸಮುದಾಯಕ್ಕೆ ಸ್ಥಾನ ಕಲ್ಪಿಸಿಲ್ಲ ಎನ್ನುವ ಆರೋಪದಲ್ಲಿ ಹುರುಳಿಲ್ಲ. ಮಾದಿಗ ಸಮುದಾಯಕ್ಕೆ ಸೇರಿದ ಬಳ್ಳಾರಿ ಜಿಲ್ಲೆಯ ಮುಂಡರಗಿ ನಾಗರಾಜ ಅವರನ್ನು ಬಾಬು ಜಗಜೀವನರಾಮ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಯಾವತ್ತೂ ಮಾದಿಗ ಸಮುದಾಯವನ್ನು ಕಡೆಗಣಿಸಿಲ್ಲ. ಸರ್ವ ಸಮುದಾಯಗಳನ್ನು ಜತೆಗೆ ತೆಗೆದುಕೊಂಡು ಹೋಗುವ ನಾಯಕರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.